ಭಾರೀ ಮಳೆ, ಪ್ರವಾಹ ಎಫೆಕ್ಟ್; 5 ರಾಜ್ಯಗಳಲ್ಲಿ ಒಟ್ಟು 465 ಸಾವು
ನವದೆಹಲಿ 28: ಮುಂಗಾರು ಮಳೆಯ ಅಬ್ಬರ ಹಾಗೂ ಪ್ರವಾಹಕ್ಕೆ ಈವರೆಗೆ ಒಟ್ಟು ಐದು ರಾಜ್ಯಗಳ್ಲಿ 465 ಜನರು ಪ್ರಾಣಕಳೆದುಕೊಂಡಿರುವುದಾಗಿ ಎನ್ ಇಆರ್ ಸಿ ತಿಳಿಸಿದೆ.
ಗೃಹ ಸಚಿವಾಲಯದ ರಾಷ್ಟ್ರೀಯ ತುತರ್ು ನೆರವು ಕೇಂದ್ರ(ಎನ್ ಇಆರ್ ಸಿ)ನೀಡಿರುವ ಮಾಹಿತಿ ಪ್ರಕಾರ, ಮಳೆ ಮತ್ತು ಪ್ರವಾಹಕ್ಕೆ ಮಹಾರಾಷ್ಟ್ರದಲ್ಲಿ 138 ಮಂದಿ, ಕೇರಳದಲ್ಲಿ 125, ಪಶ್ಚಿಮ ಬಂಗಾಳದಲ್ಲಿ 116, ಗುಜರಾತ್ ನಲ್ಲಿ 52 ಹಾಗೂ ಅಸ್ಸಾಂನಲ್ಲಿ 34 ಜನರು ಸಾವನ್ನಪ್ಪಿದ್ದಾರೆ.
ಮಹಾರಾಷ್ಟ್ರದ 26 ಜಿಲ್ಲೆಗಳು ವರುಣನ ಅಬ್ಬರಕ್ಕೆ ನಲುಗಿ ಹೋಗಿದ್ದರೆ, ಪಶ್ಚಿಮ ಬಂಗಾಲದ 22, ಅಸ್ಸಾಂನ 21, ಕೇರಳದ 10 ಹಾಗೂ ಗುಜರಾತ್ ನ 10 ಜಿಲ್ಲೆಗಳು ಮಳೆ ಹಾಗೂ ಪ್ರವಾಹಕ್ಕೆ ಸಿಲುಕಿದ್ದವು. ಅಸ್ಸಾಂನಲ್ಲಿ ಭಾರೀ ಪ್ರವಾಹದಿಂದಾಗಿ ಸುಮಾರು 2.17 ಲಕ್ಷ ಮಂದಿ ತಾತ್ಕಾಲಿಕ ಶಿಬಿರಗಳಲ್ಲಿ ವಾಸ್ತವ್ಯ ಹೂಡಿದ್ದಾರೆ.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 