ಹಿಮಾಚಲ ಪ್ರದೇಶದಲ್ಲಿ ಮಹಾ ಚಂಡಮಾರುತದಿಂದ ಮಂಜು, ಮಳೆ
ಶಿಮ್ಲಾ, ನ 7: ಮಹಾ ಚಂಡಮಾರುತ ಹಿಮಾಚಲ ಪ್ರದೇಶದ ಮೇಲೆ ಪ್ರಭಾವ ಬೀರುತ್ತಿದ್ದು, ರಾಜ್ಯದ 8 ಜಿಲ್ಲೆಗಳು ತೀವ್ರ ಮಂಜು ಇಲ್ಲವೇ ಮಳೆಯಿಂದ ಬಾಧಿತವಾಗಿವೆ. ಇದರಿಂದ ರಾಜ್ಯದಲ್ಲಿ ಪೂರ್ವ ಚಳಿಗಾಲದ ವಾತಾವರಣ ನಿರ್ಮಾಣವಾಗಿದೆ. ಆದರೆ, ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಸಜ್ಜಾಗಿರುವ ಇಲ್ಲಿನ ಧರ್ಮಶಾಲಾದಲ್ಲಿ ಮಾತ್ರ ಒಣ ಹವೆಯಿದೆ. ಇಲ್ಲಿ ನಡೆಯಲಿರುವ ಎರಡು ದಿನಗಳ ಸಮಾವೇಶವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿ, 200ಕ್ಕೂ ಹೆಚ್ಚು ವಿದೇಶಿ ಉದ್ಯಮಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಉಳಿದಂತೆ ಕಿಲೋಂಗ್ ಜಿಲ್ಲೆಯ ಲಹೌಲ್ ಸ್ಪಿತಿಯಲ್ಲಿ ಒಂದು ಸೆಂಟಿಮೀಟರ್ ಮಂಜು ಬಿದ್ದಿರುವುದು ದಾಖಲಾಗಿದೆ. ಮನಾಲಿಯ ಪ್ರವಾಸಿ ರೆಸಾರ್ಟ್ 11 ಮಿಮೀ, ಶಿಮ್ಲಾ 5.6 ಮಿಮೀ ಮಳೆಯಾಗಿದೆ. ರಾಜ್ಯದ ಪ್ರಸಕ್ತ ಹವೆಯನ್ನು ಜೋಳ, ಬಾರ್ಲ್, ಕಾಳುಗಳಂತಹ ಬೆಳೆಗಳಿಗೆ ಉತ್ತಮವಾಗಿವೆ.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 