ರಾಣೇಬೆನ್ನೂರಿನಾದ್ಯಂತ ಭಾರಿ ಮಳೆ
ಲೋಕದರ್ಶನ ವರದಿ
ರಾಣೇಬೆನ್ನೂರು.23: ನಗರ ಸೇರಿದಂತೆ ಗ್ರಾಮೀಣ ಪ್ರದೇಶದ ಬಹುತೇಕ ಭಾಗಗಳಲ್ಲಿ ಗುರುವಾರ ಗುಡುಗು-ಶಿಡಿಲು ಸಹಿತ ಭಾರಿ ಮಳೆ ಸುರಿದಿದೆ. ಸುಮಾರು ಮುಕ್ಕಾಲು ಗಂಟೆಗಳ ಕಾಲ ರಭಸದ ಮಳೆಯಾಗಿದೆ. ಇದರಿಂದ ನಗರದ ಚರಂಡಿ, ಗಟಾರ, ಮತ್ತಿತರ ತಗ್ಗು ಪ್ರದೇಶದಲ್ಲಿ ನೀರು ತುಂಬಿ ಹರಿಯಿತು. ತಾಲೂಕಿನ ಗಂಗಾಪುರದಲ್ಲಿ ಶಿಡಿಲಿಗೆ ಒಂದು ಎತ್ತು ಸಾವನ್ನಪ್ಪಿದೆ. ಇದನ್ನು ಹೊರತು ಪಡಿಸಿದರೆ ಎಲ್ಲಿಯೂ ಸಹ ಪ್ರಾಣ ಹಾಗೂ ಆಸ್ತಿ ಹಾನಿಯ ಬಗ್ಗೆ ವರದಿಯಾಗಿಲ್ಲ. ಭಾರಿ ಪ್ರಮಾಣದ ಗುಡುಗು ಸಿಡಿಲಿನಿಂದ ನಾಗರೀಕರು ಭಯ ಪಡುವಂತಾಯಿತು.
ಈ ಮಧ್ಯ ಕೆಲಹೊತ್ತು ವಿದ್ಯುತ್ ಸ್ಥಗಿತಗೊಂಡು ಜನರು ಪರದಾಡುವಂತಾಯಿತು. ವರ್ಷದ ಮೊದಲ ವರ್ಷಧಾರೆ ಇದಾಗಿದ್ದು, ಜನರು ಮಳೆಯಿಂದಾಗಿ ಸಂತಸಪಟ್ಟರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 