ರಾಣೇಬೆನ್ನೂರಿನಾದ್ಯಂತ ಭಾರಿ ಮಳೆ
ಲೋಕದರ್ಶನ ವರದಿ
ರಾಣೇಬೆನ್ನೂರು.23: ನಗರ ಸೇರಿದಂತೆ ಗ್ರಾಮೀಣ ಪ್ರದೇಶದ ಬಹುತೇಕ ಭಾಗಗಳಲ್ಲಿ ಗುರುವಾರ ಗುಡುಗು-ಶಿಡಿಲು ಸಹಿತ ಭಾರಿ ಮಳೆ ಸುರಿದಿದೆ. ಸುಮಾರು ಮುಕ್ಕಾಲು ಗಂಟೆಗಳ ಕಾಲ ರಭಸದ ಮಳೆಯಾಗಿದೆ. ಇದರಿಂದ ನಗರದ ಚರಂಡಿ, ಗಟಾರ, ಮತ್ತಿತರ ತಗ್ಗು ಪ್ರದೇಶದಲ್ಲಿ ನೀರು ತುಂಬಿ ಹರಿಯಿತು. ತಾಲೂಕಿನ ಗಂಗಾಪುರದಲ್ಲಿ ಶಿಡಿಲಿಗೆ ಒಂದು ಎತ್ತು ಸಾವನ್ನಪ್ಪಿದೆ. ಇದನ್ನು ಹೊರತು ಪಡಿಸಿದರೆ ಎಲ್ಲಿಯೂ ಸಹ ಪ್ರಾಣ ಹಾಗೂ ಆಸ್ತಿ ಹಾನಿಯ ಬಗ್ಗೆ ವರದಿಯಾಗಿಲ್ಲ. ಭಾರಿ ಪ್ರಮಾಣದ ಗುಡುಗು ಸಿಡಿಲಿನಿಂದ ನಾಗರೀಕರು ಭಯ ಪಡುವಂತಾಯಿತು.
ಈ ಮಧ್ಯ ಕೆಲಹೊತ್ತು ವಿದ್ಯುತ್ ಸ್ಥಗಿತಗೊಂಡು ಜನರು ಪರದಾಡುವಂತಾಯಿತು. ವರ್ಷದ ಮೊದಲ ವರ್ಷಧಾರೆ ಇದಾಗಿದ್ದು, ಜನರು ಮಳೆಯಿಂದಾಗಿ ಸಂತಸಪಟ್ಟರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 