ಉತ್ತರಪ್ರದೇಶ : ಭಾರಿ ಮಳೆ, ಮಿಂಚಿನ ಹೊಡೆತಕ್ಕೆ 32 ಜನರ ಸಾವು
ಲಖನೌ, ಜೂನ್ 26, ಉತ್ತರ ಪ್ರದೇಶದ ಪೂರ್ವಾಂಚಲ ಪ್ರದೇಶದಲ್ಲಿ ಕಳೆದ ರಾತ್ರಿ ಮಿಂಚು ಮತ್ತು ಗುಡುಗು ಸಹಿತ ಭಾರಿ ಮಳೆಯಾಗಿದ್ದು, ಕನಿಷ್ಠ 32 ಜನರು ಪ್ರಾಣ ಕಳೆದುಕೊಂಡರೆ 30 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಈ ಸಾವುಗಳಲ್ಲಿ 14 ಗೋರಖ್ಪುರ-ಬಸ್ತಿ ವಿಭಾಗದಿಂದ ವರದಿಯಾಗಿದ್ದು, ಡಿಯೋರಿಯಾ ಜಿಲ್ಲೆಯು ಅತಿ ಒಂಬತ್ತು ಸಾವುಗಳಿಗೆ ಸಾಕ್ಷಿಯಾಗಿದೆ.ತೋಟ, ಹೊಲ, ಗದ್ದೆಗಳಲ್ಲಿ ಕೆಲಸ ಮಾಡುತ್ತಿದ್ದ ರೈತರು ಮಿಂಚಿನ ಹೊಡೆತಕ್ಕೆ ಸಿಲುಕಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.ಮೃತರ ಕುಟುಂಬಗಳಿಗೆ ತಲಾ 4 ಲಕ್ಷ ರೂ. ಹಾಗೂ ಎಲ್ಲ ಬಗೆಯ ನೆರವು ನೀಡುವಂತೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಂಬಂಧಪಟ್ಟ ಜಿಲ್ಲೆಗಳಿಗೆ ನಿರ್ದೇಶನ ನೀಡಿದ್ದಾರೆ.ಡಿಯೋರಿಯಾ ಜಿಲ್ಲೆಯಲ್ಲಿ 9 ಸಾವುಗಳು, ಪ್ರಯಾಗರಾಜ್ನಲ್ಲಿ 6, ಬರಾಬಂಕಿ ಮತ್ತು ಅಂಬೇಡ್ಕರ್ನಗರದಲ್ಲಿ ತಲಾ 3 ಸಾವುಗಳು ಸಂಭವಿಸಿವೆ, ಸಿದ್ಧಾರ್ಥನಗರದಿಂದ 2 ಮತ್ತು ಮಹಾರಾಜ್ಗಂಜ್, ಕುಶಿಂಗರ್, ಸಂತ ಕಬೀರ್ ನಗರ, ರೇ ಬರೇಲಿ, ಉನ್ನಾವೊ, ಫತೇಪುರ್, ಜೌನ್ಪುರ, ಸೋನೆಭದ್ರಾದಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.
ಕನ್ನಡ ಭಾಷೆಯ ನಾಮಫಲಕಗಳ ಹರಿದು ಹಾಕಿದ ಕಿಡಿಗೇಡಿಗಳ ವಿರುದ್ಧ ಕ್ರಮಕೈಗೊಳ್ಳಿ
ಕ್ಷುಲ್ಲಕ ಕಾರಣದಿಂದ ಕಲ್ಲಿನಿಂದ ಜಜ್ಜಿ ವ್ಯಕ್ತಿಯ ಹತ್ಯೆ : ಕಿತ್ತೂರು ಪೊಲೀಸರಿಂದ ಆರೋಪಿ ಬಂಧನ
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ 