ಅಸ್ಸಾಂ ನಲ್ಲಿ ಭಾರಿ ಮಳೆ, ಪ್ರವಾಹ ಪರಿಸ್ಥಿತಿ
ಭುವನೇಶ್ವರ್, ಜೂನ್ 28: ಅಸ್ಸಾಂನಲ್ಲಿ ಭಾರಿ ಮಳೆ ಮುಂದುವರಿದಿದ್ದು ಪ್ರವಾಹ ಭೀತಿ ಇದೆ. ಸುಮಾರು ಎರಡು ಲಕ್ಷ 62 ಸಾವಿರ ಜನರು ಪ್ರವಾಹ ಪೀಡಿತ 21 ಜಿಲ್ಲೆಗಳಲ್ಲಿ ವಾಸಿಸುತ್ತಿದ್ದಾರೆ. ಈವರೆಗೆ 18 ಜನರು ಪ್ರಾಣ ಕಳೆದುಕೊಂಡಿದ್ದಾರೆ. ಅಲ್ಲದೇ ತುಂಬಿ ಹರಿಯುತ್ತಿರುವ ನೀರು ಬೆಳಗಳಿಗೆ ಭಾರಿ ಹಾನಿ ಉಂಟು ಮಾಡಿದೆ. ರಸ್ತೆ ಮತ್ತು ಸೇತುವೆ, ಕಾಲುವೆಗಳಲ್ಲಿ ನೀರು ಹರಿಯುತ್ತಿದ್ದು ಸಂಚಾರಕ್ಕೆ ಅಡ್ಡಿಯಾಗಿದೆ.ಸುಮಾರು 19 ಸಾವಿರ ಜನರು ತಾತ್ಕಾಲಿಕ ಆಶ್ರಯ ಶಿಬಿರಗಳಲ್ಲಿ ಆಶ್ರಯ ಪಡೆದಿದ್ದಾರೆ. ಸ್ಥಳೀಯ ಆಡಳಿತ ಪ್ರವಾಹದಿಂದ ಬಾಧಿತರಾದವರಿಗೆ ಆಹಾರ ಸಾಮಗ್ರಿಗಳನ್ನು ನೀಡಿದೆ.ಎಲ್ಲ ಪ್ರವಾಹ ಪೀಡಿತರಿಗೆ ನೆರವು ನೀಡುವಂತೆ ಅಸ್ಸಾಂ ಮುಖ್ಯಮಂತ್ರಿ ಸರ್ಬಾನಂದ್ ಸೋನೋವಾಲ್ ಸ್ಥಳೀಯ ಆಡಳಿತಕ್ಕೆ ಸೂಚನೆ ನೀಡಿದ್ದಾರೆ.
ಕನ್ನಡ ಭಾಷೆಯ ನಾಮಫಲಕಗಳ ಹರಿದು ಹಾಕಿದ ಕಿಡಿಗೇಡಿಗಳ ವಿರುದ್ಧ ಕ್ರಮಕೈಗೊಳ್ಳಿ
ಕ್ಷುಲ್ಲಕ ಕಾರಣದಿಂದ ಕಲ್ಲಿನಿಂದ ಜಜ್ಜಿ ವ್ಯಕ್ತಿಯ ಹತ್ಯೆ : ಕಿತ್ತೂರು ಪೊಲೀಸರಿಂದ ಆರೋಪಿ ಬಂಧನ
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ 