ಅಸ್ಸಾಂ ನಲ್ಲಿ ಭಾರಿ ಮಳೆ, ಪ್ರವಾಹ ಪರಿಸ್ಥಿತಿ
ಭುವನೇಶ್ವರ್, ಜೂನ್ 28: ಅಸ್ಸಾಂನಲ್ಲಿ ಭಾರಿ ಮಳೆ ಮುಂದುವರಿದಿದ್ದು ಪ್ರವಾಹ ಭೀತಿ ಇದೆ. ಸುಮಾರು ಎರಡು ಲಕ್ಷ 62 ಸಾವಿರ ಜನರು ಪ್ರವಾಹ ಪೀಡಿತ 21 ಜಿಲ್ಲೆಗಳಲ್ಲಿ ವಾಸಿಸುತ್ತಿದ್ದಾರೆ. ಈವರೆಗೆ 18 ಜನರು ಪ್ರಾಣ ಕಳೆದುಕೊಂಡಿದ್ದಾರೆ. ಅಲ್ಲದೇ ತುಂಬಿ ಹರಿಯುತ್ತಿರುವ ನೀರು ಬೆಳಗಳಿಗೆ ಭಾರಿ ಹಾನಿ ಉಂಟು ಮಾಡಿದೆ. ರಸ್ತೆ ಮತ್ತು ಸೇತುವೆ, ಕಾಲುವೆಗಳಲ್ಲಿ ನೀರು ಹರಿಯುತ್ತಿದ್ದು ಸಂಚಾರಕ್ಕೆ ಅಡ್ಡಿಯಾಗಿದೆ.ಸುಮಾರು 19 ಸಾವಿರ ಜನರು ತಾತ್ಕಾಲಿಕ ಆಶ್ರಯ ಶಿಬಿರಗಳಲ್ಲಿ ಆಶ್ರಯ ಪಡೆದಿದ್ದಾರೆ. ಸ್ಥಳೀಯ ಆಡಳಿತ ಪ್ರವಾಹದಿಂದ ಬಾಧಿತರಾದವರಿಗೆ ಆಹಾರ ಸಾಮಗ್ರಿಗಳನ್ನು ನೀಡಿದೆ.ಎಲ್ಲ ಪ್ರವಾಹ ಪೀಡಿತರಿಗೆ ನೆರವು ನೀಡುವಂತೆ ಅಸ್ಸಾಂ ಮುಖ್ಯಮಂತ್ರಿ ಸರ್ಬಾನಂದ್ ಸೋನೋವಾಲ್ ಸ್ಥಳೀಯ ಆಡಳಿತಕ್ಕೆ ಸೂಚನೆ ನೀಡಿದ್ದಾರೆ.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 