ಮಳೆಯೊಂದಿಗೆ ಬೀಸಿದ ಬಿರುಗಾಳಿ: ಪಾಳಾ ರಸ್ತೆಯಲ್ಲಿ ಉರುಳಿದ ಬೃಹತ್ ಮಾವಿನ ಮರ, ಸಂಚಾರ ಸ್ಥಗಿತ
Heavy rains and storms: Huge mango tree falls on Pala road, traffic disrupted
ಲೋಕದರ್ಶನ ವರದಿ
ಮುಂಡಗೋಡ 15 : ಕಳೆದ ಕೆಲವು ದಿನಗಳಿಂದ ತೀವ್ರ ಬೇಸಿಗೆಯ ಬಿಸಿಲಿನಿಂದ ಕಂಗಾಲಾಗಿದ್ದ ಮುಂಡಗೋಡ ತಾಲ್ಲೂಕಿನ ಜನತೆಗೆ ಭಾನುವಾರ ಸಂಜೆ ಸುರಿದ ಭಾರೀ ಮಳೆ ಸ್ವಲ್ಪ ಮಟ್ಟಿಗೆ ತಂಪು ನೀಡಿತು. ಆದರೆ ಮಳೆಯೊಂದಿಗೆ ಬೀಸಿದ ಬಿರುಗಾಳಿಯಿಂದ ಕೆಲವೆಡೆ ಅಸ್ತವ್ಯಸ್ತ ಪರಿಸ್ಥಿತಿ ಉಂಟಾಯಿತು. ತಾಲೂಕಿನ ಪಾಳಾ ಗ್ರಾಮದಿಂದ ಹಾನಗಲ್ ಕಡೆಗೆ ಸಾಗುವ ಮುಖ್ಯ ರಸ್ತೆಯಲ್ಲಿ ಬೃಹತ್ ಮಾವಿನ ಮರವೊಂದು ಗಾಳಿಯ ಅಬ್ಬರಕ್ಕೆ ಉರುಳಿ ರಸ್ತೆ ಮಧ್ಯೆ ಅಡ್ಡವಾಗಿ ಬಿದ್ದ ಪರಿಣಾಮ ವಾಹನ ಸಂಚಾರ ಕೆಲಕಾಲ ಸಂಪೂರ್ಣ ಸ್ಥಗಿತಗೊಂಡಿತು.
ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ರಸ್ತೆ ತಡೆ ಉಂಟಾಗಿ ದಾರಿಯುದ್ದಕ್ಕೂ ವಾಹನಗಳು ಸಾಲುಗಟ್ಟಿ ನಿಂತಿದ್ದರಿಂದ ಪ್ರಯಾಣಿಕರು ಪರದಾಡುವಂತಾಯಿತು. ಈ ವೇಳೆ ಇತ್ತೀಚಿನ ದಿನಗಳಲ್ಲಿ ಅಡುಗೆ ಅನಿಲ (ಸಿಲಿಂಡರ್) ಕೊರತೆಯನ್ನು ಎದುರಿಸುತ್ತಿರುವ ಕೆಲ ಸ್ಥಳೀಯರು ರಸ್ತೆಗೆ ಬಿದ್ದಿದ್ದ ಮಾವಿನ ಮರದ ಕೊಂಬೆಗಳನ್ನು ಸೌದೆಗಾಗಿ ಕೊಂಡೊಯ್ಯಲು ಮುಗಿಬಿದ್ದ ದೃಶ್ಯ ಕಂಡುಬಂತು.
ಸಿಲಿಂಡರ್ ಸಮಸ್ಯೆಯ ನಡುವೆ ಸಿಕ್ಕ ಈ ಮರದ ಕಟ್ಟಿಗೆಯನ್ನು ಸಂಗ್ರಹಿಸಲು ಜನರು ಪೈಪೋಟಿಗೆ ಇಳಿದಿದ್ದರು. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆಯ ಸಿಬ್ಬಂದಿ ಯಂತ್ರಗಳ ಸಹಾಯದಿಂದ ರಸ್ತೆಗೆ ಅಡ್ಡಲಾಗಿ ಬಿದ್ದಿದ್ದ ಬೃಹತ್ ಮರವನ್ನು ಕತ್ತರಿಸಿ ತೆರವುಗೊಳಿಸಿದರು. ಬಳಿಕ ರಸ್ತೆ ತೆರವುಗೊಳಿಸಿ ವಾಹನ ಸಂಚಾರವನ್ನು ಪುನಃ ಸುಗಮಗೊಳಿಸಲಾಯಿತು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 