ಭೀಕರ ಮಳೆಯಿಂದಾಗಿ ರೈತರ ಬೆಳೆಗಳು ಸೇರಿದಂತೆ ಮನೆಗಳಿಗೆ ಹಾನಿ
Heavy rains damage farmers' crops and homes
ಜಮಖಂಡಿ 28 : ತಾಲೂಕಿನಲ್ಲಿ ಧಾರಾಕಾರವಾಗಿ ಕಳೆದ ನಾಲ್ಕು ದಿನಗಳ ಕಾಲ ಸತತವಾಗಿ ಸುರಿಯುತ್ತಿರುವ ಭೀಕರ ಮಳೆಯಿಂದಾಗಿ ರೈತರ ಬೆಳೆಗಳು ಸೇರಿದಂತೆ ಅನೇಕ 5 ಮನೆಗಳಿಗೆ ಹಾನಿಯಾಗಿದ್ದು. ಹಲವು ಮನೆಗಳು ಧರೆಗುರುಳಿರುವ ಮಾಹಿತಿ ಲಭ್ಯವಾಗಿವೆ.
ಕೊಣ್ಣೂರ ಗ್ರಾಮದಲ್ಲಿ ಲಕ್ಕವ್ವ. ಗಾಣಗೇರ ಇವರ ಮನೆಯ ಮೇಲ್ಚಾವಣಿ ಭಾಗಶಃ ಹಾನಿಯಾಗಿದೆ. ಲಿಂಗನೂರು ಗ್ರಾಮದಲ್ಲಿ 2 ಮನೆಗಳು, ಮೈಗೂರು ಗ್ರಾಮದಲ್ಲಿ ಒಂದು ಹಾಗೂ ಹುನ್ನೂರು ಗ್ರಾಮದ ಶಾಂತವ್ವ ಭೂಶಣ್ಣವರ ಎಂಬುವರ ಮನೆ ಮಳೆಯಿಂದಾಗಿ ಹಾನಿಗೊಳಗಾಗಿದೆ. ತಾಲೂಕಿನಲ್ಲಿ ಸಧ್ಯದ ಮಾಹಿತಿಯ ಪ್ರಕಾರ 5 ಮನೆಗಳು ಹಾನಿಗೊಳಗಾಗಿದೆ,
ಭೀಕರ ಮಳೆಗೆ ರಸ್ತೆಗಳು ಜಲಾವೃತವಾಗಿದ್ದು. ನಗರದ ಮುಧೋಳ ಬೈಪಾಸ್ ರಸ್ತೆಯಲ್ಲಿ ನೀರು ಸಂಗ್ರಹವಾಗಿದೆ, ಗ್ರಾಮೀಣ ಪ್ರದೇಶದ ರಸ್ತೆಗಳು ಮಳೆಯಿಂದಾಗಿ ಹಾನಿಗೊಳಗಾಗಿದ್ದು ಸಾರ್ವಜನಿಕ ಸಂಚಾರಕ್ಕೆ ತೊಂದರೆ ಉಂಟಾಗಿದೆ, ಹುನ್ನೂರು ಪಂಚಾಯಿತಿ ವ್ಯಾಪ್ತಿಯ ಗಣೇಶನಗರ, ವೆಂಕಟೇಶ್ವರ ಕಾಲನಿ, ಬಸವೇಶ್ವರ ಕಾಲೊನಿಗಳಲ್ಲಿ ರಸ್ತೆಗಳು ಹದಗೆಟ್ಟಿವೆ. ನಗರ ಪ್ರದೇಶದ ಎಸ್ಆರ್ಎ ಕ್ಲಬ್ನಿಂದ ಸಜ್ಜಿಹನುಮಾನ ದೇವಸ್ಥಾನದ ವರೆಗಿನ ರಸ್ತೆ ಹಾಳಾಗಿದೆ. ವಿಜಯಪುರ ರಸ್ತೆ ಬಸವೇಶ್ವರ ಸರ್ಕಲ್ ಬಳಿ ಹಾಗೂ ಚಟ್ಟುಸಿಂಗ್ ಉದ್ಯಾನದ ಬಳಿ ತೆಗ್ಗು-ಗುಂಡಿಗಳು ಬಿದ್ದು ರಸ್ತೆಗಳು ಸಂಪೂರ್ಣವಾಗಿ ಹಾಳಾಗಿದ್ದು ವಾಹನಗಳ ಸಂಚಾರಕ್ಕೆ ತೊಂದರೆಯಾಗಿದೆ. ಅದೇ ರಸ್ತೆ ಮಾರ್ಗದಲ್ಲಿ ಅಧಿಕಾರಿಗಳು, ಜನಪ್ರತಿನಿಧಿಗಳು ತಮ್ಮ ವಾಹನದಲ್ಲಿ ಸಂಚರಿಸುತ್ತಿದ್ದು. ಜಾಣ ಕುರುಡರಂತೆ ವರ್ತಿಸುತ್ತಿದ್ದಾರೆಂದು ಸಾರ್ವಜನಿಕರು ಸಂಬಂಧಪಟ್ಟ ಜನಪ್ರತಿನಿಧಿಗಳಿಗೆ ಹಾಗೂ ಅಧಿಕಾರಿಗಳಿಗೆ ಹಿಡಿಶಾಪ ಹಾಕುತ್ತಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 