ಭಾರಿ ವಾಹನ ಸಂಚಾರ, ನಿಲುಗಡೆಗೆ ನಿರ್ಬಂಧ
Heavy vehicle traffic, parking restrictions
ಭಾರಿ ವಾಹನ ಸಂಚಾರ, ನಿಲುಗಡೆಗೆ ನಿರ್ಬಂಧ
ಹೂವಿನಹಡಗಲಿ 3: ತಾಲ್ಲೂಕಿನ ಮೈಲಾರ ಸುಕ್ಷೇತ್ರದಲ್ಲಿ ಜರುಗುವ ಮೈಲಾರಲಿಂ-ಗೇಶ್ವರ ಕಾರಣಿಕ ಮಹೋತ್ಸವ ಹಾಗೂ ಜಾತ್ರೆಯಲ್ಲಿ ಅಪಾರ ಭಕ್ತರು ಪಾಲ್ಗೊ-ಳ್ಳುವುದರಿಂದ ಸಾರ್ವಜನಿಕರಿಗೆ ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸುವ ಸಲುವಾಗಿ ಸೋಮವಾರದಿಂದ ನಾಲ್ಕು ದಿನಗಳವರೆಗೆ ಸುಕ್ಷೇತ್ರ ವ್ಯಾಪ್ತಿಯಲ್ಲಿ ವಾಹನಗಳ ಸಂಚಾರ ಮತ್ತು ನಿಲುಗಡೆಗೆ ನಿರ್ಬಂಧ ವಿಧಿಸಿ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಆದೇಶಿಸಿದ್ದಾರೆ.ಫೆ. 3ರ ಸಂಜೆ 4 ಗಂಟೆಯಿಂದ ಫೆ.5ರಂದು ಬೆಳಿಗ್ಗೆ 10ರ ವರೆಗೆ ಭಕ್ತರ ವಾಹನ ಹೊರತುಪಡಿಸಿ ಸರಕು ಸಾಗಣೆ ಹಾಗೂ ಭಾರಿ ವಾಹನಗಳ ಸಂಚಾರ ನಿರ್ಬಂಧಿಸಿದೆ. ಗುತ್ತಲ, ಹೊಳಲು, ಕುರುವತ್ತಿ ಮಾರ್ಗಗಳ ರಸ್ತೆಯ ಎರಡೂ ಬದಿಗಳಲ್ಲಿ ವಾಹನ ನಿಲುಗಡೆ ನಿರ್ಬಂಧಿಸಲಾಗಿದೆ. ಫೆ. 3 ಬೆಳಿಗ್ಗೆ 8ರಿಂದಫೆ.5ರ ಸಂಜೆ 6 ಗಂಟೆವರೆಗೆ ನಿಗದಿಪಡಿಸಿದ ಸ್ಥಳಗಳಲ್ಲಿ ವಾಹನ ನಿಲುಗಡೆಮಾಡತಕ್ಕದ್ದು, ಕುರುವತ್ತಿ ರಸ್ತೆ, ಹೊಳಲು ರಸ್ತೆ, ಗುತ್ತಲ ರಸ್ತೆ, ಡೊಂಬರಹಳ್ಳಿರಸ್ತೆಗಳಲ್ಲಿ ಕೆಎಸ್ಆರ್ ಟಿಸಿ ಬಸ್, ನಾಲ್ಕು ಚಕ್ರ ವಾಹನ, ದ್ವಿಚಕ್ರ ವಾಹನಗಳಪಾರ್ಕಿಂಗ್ ಗೆ ಸ್ಥಳಾವಕಾಶ ಕಲ್ಪಿಸಲಾಗಿದೆ. ನಿಗದಿತ ಸ್ಥಳಗಳಲ್ಲಿ ಮಾತ್ರ ಪಾರ್ಕಿಂಗ್ ಮಾಡಬೇಕು ಎಂದು ಆದೇಶ ಇದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 