ಭಾರಿ ವಾಹನ ಸಂಚಾರ, ನಿಲುಗಡೆಗೆ ನಿರ್ಬಂಧ
Heavy vehicle traffic, parking restrictions
ಭಾರಿ ವಾಹನ ಸಂಚಾರ, ನಿಲುಗಡೆಗೆ ನಿರ್ಬಂಧ
ಹೂವಿನಹಡಗಲಿ 3: ತಾಲ್ಲೂಕಿನ ಮೈಲಾರ ಸುಕ್ಷೇತ್ರದಲ್ಲಿ ಜರುಗುವ ಮೈಲಾರಲಿಂ-ಗೇಶ್ವರ ಕಾರಣಿಕ ಮಹೋತ್ಸವ ಹಾಗೂ ಜಾತ್ರೆಯಲ್ಲಿ ಅಪಾರ ಭಕ್ತರು ಪಾಲ್ಗೊ-ಳ್ಳುವುದರಿಂದ ಸಾರ್ವಜನಿಕರಿಗೆ ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸುವ ಸಲುವಾಗಿ ಸೋಮವಾರದಿಂದ ನಾಲ್ಕು ದಿನಗಳವರೆಗೆ ಸುಕ್ಷೇತ್ರ ವ್ಯಾಪ್ತಿಯಲ್ಲಿ ವಾಹನಗಳ ಸಂಚಾರ ಮತ್ತು ನಿಲುಗಡೆಗೆ ನಿರ್ಬಂಧ ವಿಧಿಸಿ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಆದೇಶಿಸಿದ್ದಾರೆ.ಫೆ. 3ರ ಸಂಜೆ 4 ಗಂಟೆಯಿಂದ ಫೆ.5ರಂದು ಬೆಳಿಗ್ಗೆ 10ರ ವರೆಗೆ ಭಕ್ತರ ವಾಹನ ಹೊರತುಪಡಿಸಿ ಸರಕು ಸಾಗಣೆ ಹಾಗೂ ಭಾರಿ ವಾಹನಗಳ ಸಂಚಾರ ನಿರ್ಬಂಧಿಸಿದೆ. ಗುತ್ತಲ, ಹೊಳಲು, ಕುರುವತ್ತಿ ಮಾರ್ಗಗಳ ರಸ್ತೆಯ ಎರಡೂ ಬದಿಗಳಲ್ಲಿ ವಾಹನ ನಿಲುಗಡೆ ನಿರ್ಬಂಧಿಸಲಾಗಿದೆ. ಫೆ. 3 ಬೆಳಿಗ್ಗೆ 8ರಿಂದಫೆ.5ರ ಸಂಜೆ 6 ಗಂಟೆವರೆಗೆ ನಿಗದಿಪಡಿಸಿದ ಸ್ಥಳಗಳಲ್ಲಿ ವಾಹನ ನಿಲುಗಡೆಮಾಡತಕ್ಕದ್ದು, ಕುರುವತ್ತಿ ರಸ್ತೆ, ಹೊಳಲು ರಸ್ತೆ, ಗುತ್ತಲ ರಸ್ತೆ, ಡೊಂಬರಹಳ್ಳಿರಸ್ತೆಗಳಲ್ಲಿ ಕೆಎಸ್ಆರ್ ಟಿಸಿ ಬಸ್, ನಾಲ್ಕು ಚಕ್ರ ವಾಹನ, ದ್ವಿಚಕ್ರ ವಾಹನಗಳಪಾರ್ಕಿಂಗ್ ಗೆ ಸ್ಥಳಾವಕಾಶ ಕಲ್ಪಿಸಲಾಗಿದೆ. ನಿಗದಿತ ಸ್ಥಳಗಳಲ್ಲಿ ಮಾತ್ರ ಪಾರ್ಕಿಂಗ್ ಮಾಡಬೇಕು ಎಂದು ಆದೇಶ ಇದೆ.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 