ಹೆಡಿಯಾಲ: ವರುಣನ ಕೃಪೆಗಾಗಿ ಕತ್ತೆ ಮೆರವಣಿಗೆ
ರಾಣೇಬೆನ್ನೂರು-ಮೇ.25: ತಾಲೂಕಿನ ಹೆಡಿಯಾಲ ಗ್ರಾಮದಲ್ಲಿ ಮಳೆಯ ಆಗಮನಕ್ಕಾಗಿ ಕತ್ತೆ ಮೆರವಣಿಗೆ ಮಾಡಲಾಯಿತು. ಮುಂಗಾರು ಪೂರ್ವ ಮಳೆ ಆಗದೆ ರೈತರು ಆತಂಕಗೊಂಡಿದ್ದರು. ಕತ್ತೆ ಮೆರವಣಿಗೆ ಮಾಡಿದರೆ ಮಳೆಯಾಗುತ್ತದೆ ಎಂಬ ನಂಬಿಕೆಯಿಂದ ಯುವಕರು ಕತ್ತೆಯನ್ನು ಗ್ರಾಮದ ಬೀದಿಗಳಲ್ಲಿ ಮೆರವಣಿಗೆ ನಡೆಸಿದರು. ಆರಂಭಕ್ಕೆ ಕತ್ತೆಗೆ ಬೇವಿನ ಎಲೆಯಿಂದ ಶೃಂಗರಿಸಿ ಹೂ ಮಾಲೆ ಹಾಕಲಾಯಿತು. ಆನಂತರ ಹಲಗೆ ಬಾರಿಸುತ್ತಾ ಕತ್ತೆಯನ್ನು ಗ್ರಾಮದಲ್ಲಿ ಸಂಚರಿಸಲಾಯಿತು. ಮಳೆ ಇಲ್ಲದೇ ಜನ-ಜಾನುವಾರುಗಳ ಪರಿಸ್ಥಿತಿ ಗಂಭೀರವಾಗಿದೆ. ವರುಣ ದೇವ ಬೇಗ ಕೃಪೆ ತೋರಿ ಮಳೆ ನೀಡಬೇಕು ಎಂದು ಗ್ರಾಮಸ್ಥರು ಆ ಭಗವಂತನಲ್ಲಿ ಸಾಮೂಹಿಕವಾಗಿ ಪ್ರಾಥರ್ಿಸಿದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 