ಹಿಮಾದಾಸ್ನ ಕ್ರೀಡಾ ಸಾಧನೆಯಷ್ಟೇ ಅಲ್ಲ, ಆಕೆಯ ಸಾಮಾಜಿಕ ಕಳಕಳಿಯೂ ಅಭಿನಂದನಾರ್ಹ
ಧಿಂಗ್ 14: 400 ಮೀಟರ್ ಓಟದಲ್ಲಿ ಚಿನ್ನ ಗೆದ್ದ ಅಸ್ಸಾಂ ಹುಡುಗಿ ಹಿಮಾ ದಾಸ್ ನ್ನು ಇಡೀ ಭಾರತವೇ ಇಂದು ಕೊಂಡಾಡುತ್ತಿದೆ. ಚಿನ್ನದ ಪದಕವಷ್ಟೇ ಅಲ್ಲದೇ ಆಕೆಯನ್ನು ಹೊಗಳುವುದಕ್ಕೆ ಮತ್ತೊಂದು ಕಾರಣವೂ ಇದೆ. ಏಕೆಂದರೆ ಆಕೆ ಸಾಧನೆ ಮಾಡಿರುವುದು ಕೇವಲ ಕ್ರೀಡೆಯಲ್ಲಷ್ಟೇ ಅಲ್ಲ. ಸಾಮಾಜಿಕ ಕಳಕಳಿಯಲ್ಲೂ ಮಹತ್ತರವಾದುದ್ದನ್ನು ಸಾಧಿಸಿದ್ದಾಳೆ.
ತನ್ನ ಹಿಟ್ಟೂರಾದ ಅಸ್ಸಾಂನ ಧಿಂಗ್ ಗ್ರಾಮದಲ್ಲಿದ್ದ ಕಳ್ಳಭಟ್ಟಿ ಹಾಗೂ ಸಾರಾಯಿ ಅಂಗಡಿಗಳ ಬಾಗಿಲು ಬಂದ್ ಮಾಡಿಸುವುದರಲ್ಲಿಯೂ ಹಿಮಾ ದಾಸ್ ಪ್ರಮುಖ ಪಾತ್ರ ವಹಿಸಿದ್ದೂ ಅಲ್ಲದೇ ನೆರೆಯ ಗ್ರಾಮವನ್ನೂ ಕಳ್ಳಭಟ್ಟಿ ಹಾಗೂ ಸಾರಾಯಿ ಮುಕ್ತವಾಗುವಂತೆ
ಮಾಡಿದ್ದಾಳೆ.
ಹಿಮಾ ದಾಸ್ ಮೊದಲಿನಿಂದಲೂ ಧೈರ್ಯವಂತ ಹುಡುಗಿ, ಅಕ್ರಮಗಳ ವಿರುದ್ಧ ಮಾತನಾಡುವುದಕ್ಕೆ ಎಂದಿಗೂ ಹಿಂಜರಿಯುವುದಿಲ್ಲ. ನಮಗೂ ನಮ್ಮ ರಾಷ್ಟ್ರಕ್ಕೂ ಆಕೆ ಮಾದರಿಯ ಹುಡುಗಿಯಾಗಿದ್ದಾಳೆ ಎಂದು ನೆರೆಮನೆಯವರು ಹಿಮಾ ಸಾಧನೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 