ಹೇಮರೆಡ್ಡಿ ಮಲ್ಲಮ್ಮನವರ ತತ್ವಗಳಿಂದ ಉತ್ತಮ ಸಮಾಜ ನಿರ್ಮಾಣ ಸಾಧ್ಯ: ಪ್ರೊ. ಗುರು ಶ್ರೀರಾಮುಲು
Hemareddy Mallamma's principles can help build a better society: Prof. Guru Sriramulu
ಕಲಬುರಗಿ 11 : ಮಹಾಸಾದ್ವಿ ಶಿರೋಮಣಿ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮನವರ ಚಿಂತನೆ ಮತ್ತು ಜೀವನ ತತ್ವ ಪಾಲನೆ ಮೂಲಕ ಆದರ್ಶ ಮಹಿಳೆಯಾಗಿದ್ದಾರೆ. ಅವರ ಉತ್ತಮ ವಿಚಾರಗಳನ್ನು ಪಾಲನೆ ಮಾಡಿದರೆ ಆದರ್ಶ ಸಮಾಜ ರೂಪಿಸಬಹುದು ಎಂದು ಗುಲಬರ್ಗಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಗೂರು ಶ್ರೀರಾಮುಲು ಅಭಿಪ್ರಾಯಪಟ್ಟರು.
ಗುಲಬರ್ಗಾ ವಿಶ್ವವಿದ್ಯಾಲಯದ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಅಧ್ಯಯನ ಪೀಠದಿಂದ ಆಯೋಜಿಸಿದ ಮಹಾ ಸಾದ್ವಿ ಶಿರೋಮಣಿ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ನವರ 603ನೇ ಜಯಂತ್ಯೋತ್ಸವದಲ್ಲಿ ಹೇಮರಡ್ಡಿ ಮಲ್ಲಮ್ಮ ಅವರ ಭಾವಚಿತ್ರಕ್ಕೆ ಪುಷ್ಪ ಸಮರ್ಿಸಿ ಮಾತನಾಡಿ ಸರ್ಕಾರ ಹೇಮರಡ್ಡಿ ಮಲ್ಲಮ್ಮ ಜಯಂತಿ ಆಚರಿಸುವಂತೆ ಕೈಗೊಂಡಿರುವ ನಿರ್ಧಾರ ಅತ್ಯಂತ ಮಹತ್ವ ಮತ್ತು ಅರ್ಥಪೂರ್ಣ ಎಂದರು.
ಕಲ್ಯಾಣ ಕರ್ನಾಟಕ ಭಾಗದ ದಿ ಡೈಲಿ ನ್ಯೂಸ್ ದಿನಪತ್ರಿಕೆ ಮುಖ್ಯಸ್ಥ ಮಹಿಪಾಲರೆಡ್ಡಿ ಮುನ್ನೂರು ಮುಖ್ಯ ಅತಿಥಿಯಾಗಿ ಮಾತನಾಡಿ ಮನುಕುಲದ ಮಹಾತಾಯಿ ಎನಿಸಿಕೊಂಡ ಹೇಮರೆಡ್ಡಿ ಮಲ್ಲಮ್ಮ ಕೌಟುಂಬಿಕ ಕಲಹ ಮತ್ತು ಸಂಕಷ್ಟಗಳ ನಡುವೆ ಅವಮಾನಗಳನ್ನು ಸಹಿಸಿಕೊಂಡು ಬದುಕಿದರು. ಇಡೀ ಜಗತ್ತನ್ನ ರಕ್ಷಿಸುವ ಶಕ್ತಿ ಮಹಿಳಾ ಕುಲಕ್ಕಿದೆ ಎಂದು ದರ್ಶನ ಮಾಡಿಕೊಟ್ಟು ಬದುಕನ್ನು ಬಂಗಾರವಾಗಿಸಿಕೊಂಡಂತಹ ನಮ್ಮ ನಡುವಿನ ಅನರ್ಘ್ಯ ರತ್ನವಾಗಿರುವ ಹೇಮರಡ್ಡಿ ಮಲ್ಲಮ್ಮ ಜಗಮಾನಸದಲ್ಲಿ ಅಮರವಾಗಿದ್ದರೆ ಎಂದರು.
ಸಾದ್ವಿ ಶಿರೋಮಣಿ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಕಾರ್ಯಕ್ರಮ ಸಂಚಾಲಕಿ ಪ್ರೊ. ಜೆ. ಲಲಿತಾ ಅತಿಥಿ ಗಣ್ಯರನ್ನು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಸಿಂಡಕೇಟ್ ಸದಸ್ಯ ಮಲ್ಲಣ್ಣ ಎಸ್ ಮಡಿವಾಳ, ಕುಲಸಚಿವ ಪ್ರೊ. ರಮೇಶ ಲಂಡನಕರ್ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ವಿಶ್ವವಿದ್ಯಾಲಯದ ವಿವಿಧ ವಿಭಾಗಗಳ ಮುಖ್ಯಸ್ಥರು, ಪ್ರಾಧ್ಯಾಪಕರು, ಅತಿಥಿ ಉಪನ್ಯಾಸಕರು, ಸಂಶೋಧನಾ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳು, ಶಿಕ್ಷಕೇತರ ಸಿಬ್ಬಂದಿ ಹಾಗೂ ಮುಂತಾದವರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 