ಭಾರತೀಯ ಸೈನಿಕರ ವೀರೋಚಿತ ಹೋರಾಟ: ತಿರಂಗಾ ಯಾತ್ರೆ
Heroic struggle of Indian soldiers: Tiranga Yatra
ಚಿಕ್ಕೋಡಿ 20: ನಮ್ಮ ಸೈನಿಕರು ಆಪರೇಷನ್ ಸಿಂದೂರ ಮೂಲಕ ಪಾಕಿಸ್ತಾನಕ್ಕೆ ಸರಿಯಾದ ಉತ್ತರ ನೀಡಿದ್ದಾರೆ. ಅಪ್ರಚೋದಕ ದಾಳಿ ನಡೆಸಿ ಅಮಾಯಕರನ್ನು ಬಲಿ ತೆಗೆದುಕೊಂಡಿದ್ದ ಪಾಕಿಸ್ತಾನ ಎದೆ ನಡುಗಿಸುವ ಉತ್ತರ ನೀಡಿದೆ. ಭಾರತೀಯ ಸೈನಿಕರ ವೀರೋಚಿತ ಹೋರಾಟಕ್ಕೆ ಎಲ್ಲರೂ ಬೆಂಬಲಿಸೋಣ ಎಂದು ಮಾಜಿ ಸಚಿವೆ ಹಾಗೂ ಶಾಸಕಿ ಶಶಿಕಲಾ ಜೊಲ್ಲೆ ಹೇಳಿದರು.
ಚಿಕ್ಕೋಡಿ ಪಟ್ಟಣದಲ್ಲಿ ಆಯೋಜಿಸಿದ ತಿರಂಗಾ ಯಾತ್ರೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ದೇಶ ಸೈನಿಕ ಹಿಂದೆ ನಾವಿದ್ದೇವೆ ಎನ್ನುವ ಸಂದೇಶದೊಂದಿಗೆ ಅವರ ಮನಸ್ಥೆರ್ಯ ಹೆಚ್ಚಿಸಲು ರಾಜ್ಯಾದ್ಯತ ತಿರಂಗಾ ಯಾತ್ರೆ ನಡೆಸಲಾಗುತ್ತಿದೆ. ದೇಶದ ವಿಷಯ ಬಂದಾಗ ಪಕ್ಷಾತೀತ,ಜ್ಯಾತ್ಯಾತೀತವಾಗಿ ಎಲ್ಲರೂ ಒಂದಾಗಿ ದೇಶದ ಬೆನ್ನೆಲುಬುವಾಗಿ ನಿಲ್ಲಬೇಕು ಎಂದರು.
ಮಾಜಿ ವಿಧಾನ ಪರಿಷತ್ ಸದಸ್ಯ ಮಹಾಂತೇಶ ಕವಟಗಿಮಠ, ರಾಜ್ಯಸಭೆ ಸದಸ್ಯ ಈರಣ್ಣಾ ಕಡಾಡಿ ಮಾತನಾಡಿದರು.
ಚಿಕ್ಕೋಡಿ ಸಂಪಾದನಾ ಚರಮೂರ್ತಿ ಮಠದ ಸಂಪಾದನಾ ಮಹಾಸ್ವಾಮಿಗಳು, ಸದಲಗಾದ ಡಾ.ಶ್ರದ್ಧಾನಂದ ಮಹಾಸ್ವಾಮಿಗಳು, ಶಾಸಕರಾದ ಡಿ.ಎಂ.ಐಹೊಳೆ, ಶಾಸಕ ನಿಖಿಲ ಕತ್ತಿ,ಮಾಜಿ ಸಂಸದ ಅಣ್ಣಾಸಾಹೇಬ ಜೊಲ್ಲೆ, ಹೆಸ್ಕಾಂ ಮಾಜಿ ನಿರ್ದೇಶಕ ಮಹೇಶ ಭಾತೆ, ಸಂಜಯ ಕವಟಗಿಮಠ, ಸಂಜಯಗೌಡ ಪಾಟೀಲ, ದುಂಡಪ್ಪ ಬೆಂಡವಾಡೆ,ಶಾಂಭವಿ ಅಶ್ವಥಪುರ, ಚಂದ್ರಶೇಖರ ಅರಭಾವಿ ಸೇರಿದಂತೆ ಮಾಜಿ ಸೈನಿಕರು, ವೈಧ್ಯಕೀಯ ಸಂಘದ ಸದಸ್ಯರು, ಮಹಿಳೆಯರು, ಯುವಕರು, ಕೆಎಲ್ಇ, ಸಿಎಲ್ಇ ಹಾಗೂ ಸಿಟಿಇ ಸಂಸ್ಥೆ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು, ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 