ಹಾರೂಗೇರಿಯಲ್ಲಿ ಶೀಘ್ರ ಹೈಟೆಕ್ ಗ್ರಂಥಾಲಯ ನಿರ್ಮಾಣ: ಸಚಿವ ಜಾರಕಿಹೊಳಿ
Hi-tech library to be built soon in Harugeri: Minister Jarkiholi
ಹಾರೂಗೇರಿ 06: ಹಾರೂಗೇರಿ ಬೆಳಗಾವಿ ಜಿಲ್ಲೆಯ ಶಿಕ್ಷಣ ಕಾಶಿ. ಇಲ್ಲಿ ಸುಮಾರು 15 ಸಾವಿರಕ್ಕೂ ಹೆಚ್ಚು ಶಾಲಾ ಕಾಲೇಜು ವಿದ್ಯಾರ್ಥಿಗಳು ಅಧ್ಯಯನ ಮಾಡುತ್ತಿದ್ದು, ವಿದ್ಯಾರ್ಥಿಗಳ ಸ್ಪರ್ಧಾತ್ಮಕ ಪರೀಕ್ಷೆ ತಯಾರಿ ಮತ್ತು ಜ್ಞಾನಾಭಿವೃದ್ಧಿಗಾಗಿ ಶೀಘ್ರ ಹೈಟೆಕ್ ಗ್ರಂಥಾಲಯವನ್ನು ನಿರ್ಮಾಣ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಹಾಗೂ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ಪಟ್ಟಣದ ಪುರಸಭೆ ಸಭಾಭವನದಲ್ಲಿ ಮಂಗಳವಾರ ನಡೆದ ಪ್ರಗತಿ ಪರೀಶೀಲನಾ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು ಪಟ್ಟಣದ ರಾಯಬಾಗ ರಸ್ತೆಯ ವಾರ್ಡ ನಂ.10ರಲ್ಲಿ ಹೈಟೆಕ್ ಗ್ರಂಥಾಲಯ ನಿರ್ಮಾಣಕ್ಕೆ ಸ್ಥಳವನ್ನು ಗುರುತಿಸಲಾಗಿದ್ದು, ತಕ್ಷಣ 2 ಅಂತಸ್ತಿನ ಬ್ಲೂಪ್ರಿಂಟ್ ತಯಾರಿಸಲು ಸಂಬಂಧ ಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದ್ದು, ಶೀಘ್ರದಲ್ಲೇ ಕಟ್ಟಡ ಕಾಮಗಾರಿಯನ್ನು ಪ್ರಾರಂಭಿಸಲಾಗುತ್ತದೆ ಎಂದು ಹೇಳಿದರು.
ಬೀದಿಬದಿ ವ್ಯಾಪಾರಸ್ತರಿಗೆ ಪುರಸಭೆಯಿಂದ ಸಿಗುವ ಸೌಲಭ್ಯಗಳನ್ನು ಮಂಜೂರು ಮಾಡಬೇಕು. ಪಟ್ಟಣದಲ್ಲಿ ಕುಡಿಯುವ ನೀರಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಬೇಕು. ಮೊದಲಾದ ಸಾರ್ವಜನಿಕ ಸಮಸ್ಯೆಗಳನ್ನು ಆಲಿಸಿ, ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿ ಬಗೆ ಹರಿಸುವುದಾಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ಈ ವೇಳೆ ಹಾರೂಗೇರಿ ಪುರಸಭೆಗೆ ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ ಪುರಸಭೆ ಸದಸ್ಯರು ಮನವಿ ಮಾಡಿದರು.
ರಾಯಬಾಗ ತಹಸೀಲ್ದಾರ ಸುರೇಶ ಮುಂಜೆ, ಮಾಜಿ ಶಾಸಕ ಎಸ್.ಬಿ.ಘಾಟಗೆ, ಪುರಸಭೆ ಅಧ್ಯಕ್ಷ ವಸಂತ ಲಾಳಿ, ಉಪಾಧ್ಯಕ್ಷ ಬಸವರಾಜ ಅರಕೇರಿ, ಮುಖ್ಯಾಧಿಕಾರಿ ಅಭಿಷೇಕ ಪಾಂಡೆ, ಕಾಂಗ್ರೆಸ್ ಕಿಸಾನ ರಾಜ್ಯ ಘಟಕ ಉಪಾಧ್ಯಕ್ಷ ದಸ್ತಗೀರ ಕಾಗವಾಡೆ, ರೇವಣ್ಣ ಸರವ, ಗೀರೀಶ ದರೂರ, ಪ್ರವೀಣ ಗಸ್ತಿ, ಅಪ್ಪಾಸಾಬ ಸರಿಕರ, ನ್ಯಾಯವಾದಿ ಎಂ.ಎಂ.ಚಿಂಚಲಿಕರ, ಮಹೇಶ ಐಹೊಳೆ, ರವಿ ಗಸ್ತಿ, ಯಲ್ಲಪ್ಪ ಶಿಂಗೆ, ಬಸವರಾಜ ಚೌಗಲಾ, ಸಂತೋಷ ಸಿಂಗಾಡಿ, ವಿಶಾಲ ಅರಕೇರಿ, ಬಾಬುರಾವ ನಡೋಣಿ ಹಾಗೂ ಮೊದಲಾದ ಅಧಿಕಾರಿಗಳು ಮತ್ತು ಪುರಸಭೆ ಸದಸ್ಯರು ಉಪಸ್ಥಿತರಿದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 