ಡಿ.ಕೆ.ಶಿವಕುಮಾರ್ ಬೆಂಬಲಕ್ಕೆ ನಿಲ್ಲುವಂತೆ ಹೈಕಮಾಂಡ್ ಆದೇಶ
ಬೆಂಗಳೂರು, ಆ 30 ಜಾರಿನಿರ್ದೇಶಾನಲಯ (ಇಡಿ) ಸಮನ್ಸ್ ಜಾರಿ ಹಾಗೂ ಬಂಧನ ಸಾಧ್ಯತೆ ಹಿನ್ನೆಲೆಯಲ್ಲಿ ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಡಿ ಕೆ ಶಿವಕುಮಾರ್ ಅವರ ಬೆಂಬಲಕ್ಕೆ ರಾಜ್ಯ ಕಾಂಗ್ರೆಸ್ ನಾಯಕರು ನಿಲ್ಲುವಂತೆ ಪಕ್ಷದ ಹೈಕಮಾಂಡ್ ಆದೇಶಿಸಿದೆ.
2017 ರಲ್ಲಿ ಗುಜರಾತ್ ಹಾಗೂ ಮಹಾರಾಷ್ಟ್ರದ ಕಾಂಗ್ರೆಸ್ ಶಾಸಕರನ್ನು ಆಪರೇಷನ್ ಕಮಲದಿಂದ ಬಚಾವ್ ಮಾಡುವಲ್ಲಿ ಡಿ.ಕೆ.ಶಿವಕುಮಾರ್ ನಿರ್ಣಾಯಕ ಪಾತ್ರವಹಿಸಿದ್ದರು. ಹೈಕಮಾಂಡ್ ಸೂಚನೆಯ ಮೇರೆಗೆ ಶಾಸಕರನ್ನು ರೆಸಾರ್ಟ್ನಲ್ಲಿಟ್ಟು ಬಿಜೆಪಿಯಿಂದ ರಕ್ಷಿಸುವ ಪ್ರಯತ್ನ ಮಾಡಲಾಗಿತ್ತು.
ಇದೇ ಸಂದರ್ಭದಲ್ಲಿ ಡಿಕೆಶಿ ಹಾಗೂ ಅವರ ಬೆಂಬಲಿಗರ ಆಸ್ತಿ ಮೇಲೆ ಐಟಿ ದಾಳಿ ನಡೆಸಲಾಗಿತ್ತು. ಐಟಿ ದಾಳಿ ಹಿನ್ನೆಲೆಯಲ್ಲಿ ಜಾರಿನಿರ್ದೇಶನಾಲಯ ಶಿವಕುಮಾರ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದೆ. ಶಿವಕುಮಾರ್ ವಿಚಾರಣೆಯಲ್ಲಿ ಸಮರ್ಪಕ ಉತ್ತರ ನೀಡದಿದ್ದಲ್ಲಿ ಬಂಧನವೂ ಎದುರಾಗಬಹುದು. ಇಂತಹ ಸಂದರ್ಭದಲ್ಲಿ ಆಂತರಿಕ ಭಿನ್ನಾಭಿಪ್ರಾಯವನ್ನು ಮರೆತು ಶಿವಕುಮಾರ್ ಅವರ ಬೆಂಬಲಕ್ಕೆ ರಾಜ್ಯ ಕಾಂಗ್ರೆಸ್ ನ ಎಲ್ಲಾ ನಾಯಕರು ನಿಲ್ಲುವಂತೆ ಹೈಕಮಾಂಡ್ ಸೂಚಿಸಿದೆ.
ಜಾರಿನಿರ್ದೇಶನಾಲಯ ವಿಚಾರಣೆ ಮುಂದೆ ಹಾಜರಾಗಲು ಮಾಜಿ ಸಚಿವ ಡಿ ಕೆ ಶಿವಕುಮಾರ್ ಶುಕ್ರವಾರ ಮಧ್ಯಾಹ್ನ ದೆಹಲಿಗೆ ತೆರಳಿದ್ದಾರೆ
ಮಧ್ಯಾಹ್ನ 1 ಗಂಟೆಗೆ ತುರ್ತು ವಿಚಾರಣೆಗೆ ಹಾಜರಾಗುವಂತೆ ಗುರುವಾರ ರಾತ್ರಿ ಡಿಕೆಶಿ ಅವರಿಗೆ ಅಧಿಕಾರಿಗಳು ಸಮನ್ಸ್ ನೀಡಿದ್ದರು. ಕುಟುಂಬದ ಪೂರ್ವನಿಯೋಜಿತ ಹಾಗೂ ವೈಯಕ್ತಿಕ ಕೆಲಸದ ನಿಮಿತ್ತ ನಿಗದಿತ ಸಮಯಕ್ಕೆ ವಿಚಾರಣೆಗೆ ಹಾಜರಾಗಲು ಸಾಧ್ಯವಿಲ್ಲ. ಒಂದೆರೆಡು ಗಂಟೆ ತಡವಾಗಿ ವಿಚಾರಣೆಗೆ ಹಾಜರಾಗುವುದಾಗಿ ಡಿಕೆಶಿ ಇಡಿಗೆ ಮನವಿ ಮಾಡಿದ್ದರು.
ಸಂಜೆ 4.30 ರ ಸುಮಾರಿಗೆ ದೆಹಲಿ ತಲುಪಲಿರುವ ಅವರು ಸಂಜೆ 5 ಕ್ಕೆ ಇಡಿ ಮುಂದೆ ಹಾಜರಾಗುವ ಸಾಧ್ಯತೆಯಿದೆ. ದೆಹಲಿಯ ವಿಮಾನನಿಲ್ದಾಣದಲ್ಲಿ ವಕೀಲರ ಜೊತೆ ಚರ್ಚಿಸಿ ಬಳಿಕ ಡಿಕೆಶಿ ಇಡಿ ಕಚೇರಿಗೆ ತೆರಳಲಿದ್ದಾರೆ. ಇಡಿ ಅಧಿಕಾರಿಗಳು ಕೇಳುವ ಪ್ರಶ್ನೆಗಳಿಗೆ ಲಿಖಿತ ರೂಪದಲ್ಲಿ ಶಿವಕುಮಾರ್ ಉತ್ತರಿಸಬೇಕಿದೆ. ಉತ್ತರ ಪಡೆದು ವಾಪಸ್ ಕಳುಹಿಸಬಹುದು ಅಥವಾ ಸಮರ್ಪಕ ಉತ್ತರ ನೀಡದಿದ್ದರೆ ಬಂಧಿಸುವ ಸಾಧ್ಯತೆಯೂ ಇದೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 