ಶೈಕ್ಷಣಿಕ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ: ಹಿಟ್ನಾಳ
ಲೋಕದರ್ಶನ ವರದಿ
ಕೊಪ್ಪಳ: ರೂ.75 ಲಕ್ಷದ ಸರಕಾರಿ ಮಹಿಳಾ ಪದವಿ ಕಾಲೇಜಿನ ಹೆಚ್ಚುವರಿ ಕೊಠಡಿ ನಿಮರ್ಾಣ ಕಾಮಗಾರಿಗೆ ಭೂಮಿಪೂಜೆ ನೇರವೇರಿಸಿ ಮಾತನಾಡಿದ ಶಾಸಕ ಕೆ.ರಾಘವೇಂದ್ರ ಹಿಟ್ನಾಳರವರು ಸುಮಾರು 20 ವರ್ಷಗಳ ಬೇಡಿಕೆಯಾಗಿದ್ದ ಮಹಿಳಾ ಪದವಿ ಕಾಲೇಜು ಪೂರ್ಣಗೊಂಡಿದ್ದು, ವಿಧ್ಯಾರ್ಥಿಗಳ ಸಂಖ್ಯೆಯು ಪ್ರತಿ ವರ್ಷವೂ ಹೆಚ್ಚಾಗುತ್ತಿದ್ದು, ಅದರ ಅನುಗುಣವಾಗಿ ಹೆಚ್ಚುವರಿ ಕೊಠಡಿಗಳ ನಿರ್ಮಾಣ ಕೈಗೊಳ್ಳಲಾಗಿದೆ. ಶೀಘ್ರದಲ್ಲಿಯೇ ಚುಕನಕಲ್ ಗ್ರಾಮದ ಬಳಿ ಅಂದಾಜು ಮೊತ್ತ ರೂ.10 ಕೋಟಿ ವೆಚ್ಚದಲ್ಲಿ ಪಿ.ಜಿ.ಸೆಂಟರ್ ಕಟ್ಟಡ ನಿರ್ಮಾಣ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು. ಈಗಾಗಲೇ ಕೊಪ್ಪಳ ನಗರದಲ್ಲಿ ವೈದ್ಯಕೀಯ ಶಿಕ್ಷಣ ಕಾಲೇಜು ಹಾಗೂ ಬಾನಾಪೂರ ಬಳಿ ಇಂಜೀನಿಯರಿಂಗ್ ಕಾಲೇಜು ಕಾರ್ಯ ಆರಂಬಿಸಿದ್ದು, ಈ ಭಾಗದ ವಿದ್ಯಾಥರ್ಿಗಳು ಸರಕಾರದ ಸವಲತ್ತುಗಳನ್ನು ಸದ್ಬಳಕೆ ಮಾಡಿಕೊಂಡು ಕೊಪ್ಪಳದ ಕೀತರ್ಿ ಹೆಚ್ಚಿಸಬೇಕೆಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಶ ಬೂಮರೆಡ್ಡಿ, ಮಾಜಿ ಪ್ರಾಧಿಕಾರ ಅಧ್ಯಕ್ಷ ಜುಲ್ಲು ಖಾದ್ರಿ, ಮಾಜಿ ಜಿ.ಪಂ.ಸದಸ್ಯ ಪ್ರಸನ್ನ ಗಡಾದ, ನಗರಸಭೆ ಸದಸ್ಯರುಗಳಾದ ಗುರುರಾಜ ಹಲಗೇರಿ, ಅಕ್ಬರಪಾಷಾ ಪಲ್ಟನ, ಉಮಾ ಪಾಟೀಲ, ಸಾಹಿತಿಗಳಾದ ಅಲ್ಲಮ ಪ್ರಭು ಬೇಟದೂರು, ಹೆಚ್.ಎಸ್.ಪಾಟೀಲ, ಬಸವರಾಜ ಅಕ್ಕಲವಾಡಿ, ಬಿ.ಜಿ.ಕರಿಗಾರ, ಅಕ್ತರ ಫಾರುಖಿ, ಸುರೇಶ ಮುಂಡರಗಿ, ಹಾರೂನಖಾನ್, ಪದವಿ ಕಾಲೇಜಿನ ಪ್ರಾಚಾರ್ಯರು, ಪ್ರಾಧ್ಯಾಪಕರು, ವಿದ್ಯಾಥರ್ಿನಿಗಳು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 