ಗಾಣಗಾಪೂರಕ್ಕೆ ತೆರಳುತ್ತಿರುವ ಮಹಾರಾಷ್ಟ್ರದ ಪಾದಯಾತ್ರಿಗಳು
Hikers from Maharashtra heading to Ganagapur
ಆಲಮೇಲ 30 : ದತ್ತ ಜಯಂತಿ ನಿಮಿತ್ಯ ಮಹಾರಾಷ್ಟ್ರದ ಭಕ್ತರು ದತ್ತಾತ್ರೆ ಮೂರ್ತಿಯ ಪಲ್ಲಕಿಯೊಂದಿಗೆ ಪಾದಯಾತ್ರೆ ಮೂಲಕ ಗಾಣಗಾಪೂರಕ್ಕೆ ತೆರಳುತ್ತಿರುವದು. ದತ್ತಾತೆಯ ಪಾದಯಾತ್ರಿಗಳು ಬಾನುವಾರ ಆಲಮೇಲ ಪಟ್ಟಣಕ್ಕೆ ಆಗಮಿಸಿದ್ದು ಸ್ಥಳಿಯ ಭಕ್ತರು ಸ್ವಾಗತಿಸಿದರು. ನಂತರ ಅಫಜಲಪೂರ ರಸ್ತೆಯ ಮಹಾದೇವ ಗೋಪಾಳ ಬಂಡಗಾರ ಇವರ ತೊಟದ ಮನೆಯಲ್ಲಿ ವಾಸ್ತವ್ಯ ಮಾಡಿದರು ಬಂಡಗಾರ ಕುಟುಂಬ ಭಕ್ತಿಯಿಂದ ಸ್ವಾಗತಿಸಿ ವಿಶೇಷ ಪೂಜೆಗೈದು ಬಿಳಕೊಟ್ಟರು. ಬೆಳಗ್ಗೆ 11 ಗಂಟೆಗೆ ಬಂಡಗಾರ ತೋಟದ ಮನೆಯಲ್ಲಿ ವಿಶ್ರಾಂತಿ ಪಡೆದು ಮದ್ಯಾಹ್ನ ಪ್ರಸಾದ ಸೇವಿಸಿ ಸಾಯಂಕಾಲ 4 ಗಂಟೆಗೆ ಮತ್ತೆ ಪಾದಯಾತ್ರೆ ಮೂಲಕ ದೇವಣಗಾಂವ ಮಾರ್ಗವಾಗಿ ಗಾಣಗಾಪೂರಕ್ಕೆ ತೆರಳಿದರು. ಪಾದಯಾತ್ರಿಕರು ಮಹಾರಾಷ್ಟ್ರದ ಸೊಲಾಪೂರ ಜಿಲ್ಲೆಯ ಮಾಳಸಿರಸ ನಗರದ ಗುರುದೇವ ದತ್ತ ಸೇವಾ ಮಂಡಳಿ ನೇತೃತ್ವದಲ್ಲಿ ಮೂರೆನೆ ವರ್ಷ ಹೊಸ ಪಲ್ಲಕ್ಕಿಯೊಂದಿಗೆ ಪಾದಯಾತ್ರೆಯ ಮೂಲಕ ಕರ್ನಾಟಕದ ಕಲಬುರ್ಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಗಾಣಗಾಪೂರ ದತ್ತಾತ್ರಾಯ ದರ್ಶನಕ್ಕೆ ತೆರಳುತ್ತಿರುವದಾಗಿ ಗುರುದೇವ ದತ್ತ ಸೇವಾ ಮಂಡಳಿ ಪ್ರಮುಖ ಪೂಜಾರಿ ದಾದಾ ಮಹಾರಾಜ ತಿಳಿಸಿದರು. ಪಾದಯಾತ್ರೆಯಲ್ಲಿ ಪ್ರಮುಖರಾದ ಬಾರಮತಿಯ ದತ್ತಾತ್ರೆಯ ಗೋರೆ, ವಿಜಯ ಗೊರೆ ಮುಂತಾದವರು ಇದ್ದರು. ವಿಶೇಷವಾಗಿ ಗಾಣಗಾಪುರಕ್ಕೆ ತೆರಳುತ್ತಿರುವ ಪಾದಯಾತ್ರೆ ಫಲಕ್ಕಿ ರಥ ವನ್ನು ಸಾಗರ್ತಿಸಿ ಬೀಳ್ಕೊಟ್ಟ ಮಹಾದೇವ ಬಂಡಗಾರ ಕುಟುಂಬಸ್ಥರು.
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ 