ಮುಂಡಗೋಡಿನಲ್ಲಿ ಗೋ ಹತ್ಯೆ ಖಂಡಿಸಿ ಹಿಂದೂ ಸಂಘಟನೆಗಳಿಂದ ಪ್ರತಿಭಟನೆ
Hindu organizations protest against cow slaughter in Mundgod
ಮುಂಡಗೋಡಿನಲ್ಲಿ ಗೋ ಹತ್ಯೆ ಖಂಡಿಸಿ ಹಿಂದೂ ಸಂಘಟನೆಗಳಿಂದ ಪ್ರತಿಭಟನೆ
ಮುಂಡಗೋಡ 25: ಪಟ್ಟಣದ ರಜಾಕಿಯಾ ದರ್ಗಾದ ಹಿಂಭಾಗದಲ್ಲಿ ಗುರುವಾರ ಬೆಳ್ಳಂಬೆಳಿಗ್ಗೆ ಗೋ ಮಾತೇಯ ಕಡಿದು ಹತ್ಯೆ ಮಾಡಿದ್ದಾರೆ. ಗೋ ಹತ್ಯೆ ಮಾಡಿದ ಹಂತಕರಿಗೆ ಕಠಿಣ ಶಿಕ್ಷೆ ವಿಧಿಸಿ ಗಡಿ ಪಾರು ಮಾಡಬೇಕೆಂದು ಹಿಂದೂ ಸಂಘಟನೆಗಳಿಂದ ಪ್ರತಿಭಟನೆ ನಡಿಸಿದ್ದರು.
ಇಲ್ಲಿಯ ಶಿವಾಜಿ ಸರ್ಕಲ್ ನಿಂದು ಮುಂಡಗೋಡ ಪೋಲಿಸ ಠಾಣೆ ವರೆಗೂ ಪ್ರತಿಭಟಿಸಿ ಮೆರವಣಿಗೆ ನಡೆಸಿದ ಹಿಂದೂ ಸಂಘಟನೆಯವರು ಹಾಗೂ ಕಾರ್ಯಕರ್ತರು ಮೆರವಣಿಗೆಯುದ್ದಕ್ಕೂ ಗೋ ಹತ್ಯೆಯ ಹಂತಕರನ್ನು ಕೂಡಲೇ ಬಂಧಿಸಬೇಕೆಂದು ಘೋಷಣೆ ಕೂಗುತ್ತ ಗೋ ಹತ್ಯೆ ಮಾಡಿದ ಹಂತಕರನ್ನು ಕಠಿಣ ಶಿಕ್ಷೆ ವಿಧಿಸಬೇಕೆಂದು ಹಾಗೂ ಗಡಿ ಪಾರು ಮಾಡಬೇಕೆಂದು ಆಗ್ರಹಿಸಿ ಮುಂಡಗೋಡ ಸಿಪಿಐ ರಂಗನಾಥ ನೀಲಮ್ಮನವರ ಅವರಿಗೆ ಮನವಿ ಸಲ್ಲಿಸಿದರು.
ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ರಂಗನಾಥ್ ನೀಲಮ್ಮನವರ ಭರವಸೆ ನೀಡಿದರು.
ಈ ವೇಳೆಗೆ ಹಿಂದೂ ಜಾಗರಣ ವೇದಿಕೆ ತಾಲೂಕು ಸಂಚಾಲಕರು ಪ್ರಕಾಶ ಬಡಿಗೇರ, ಶಂಕರ ಲಮಾಣಿ, ಮಂಜುನಾಥ ಎಚ್.ಪಿ ತಂಗಮ್ ಚಿನ್ನನ್ ಅಯ್ಯಪ್ಪ ಭಜಂತ್ರಿ, ಫಣಿರಾಜ ಹದಳಗಿ, ಶೇಖರ ಲಮಾಣಿ, ಮಂಜುನಾಥ ಪಾಟೀಲ, ಸುರೇಶ ಕಲ್ಲೋಳ್ಳಿ, ಭರತ ಹದಳಗಿ, ಬಾಬು ವಾಲ್ಮೀಕಿ, ರಾಜೇಶರಾವ್, ಮಂಜುನಾಥ ಶೇಟ್ ನಾಗರಾಜ ಹದಳಗಿ ಸೇರಿದಂತೆ ಎಬಿವಿಪಿ ಸಂಘಟನೆಯ ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 