ಮುಂಡಗೋಡಿನಲ್ಲಿ ಗೋ ಹತ್ಯೆ ಖಂಡಿಸಿ ಹಿಂದೂ ಸಂಘಟನೆಗಳಿಂದ ಪ್ರತಿಭಟನೆ
Hindu organizations protest against cow slaughter in Mundgod
ಮುಂಡಗೋಡಿನಲ್ಲಿ ಗೋ ಹತ್ಯೆ ಖಂಡಿಸಿ ಹಿಂದೂ ಸಂಘಟನೆಗಳಿಂದ ಪ್ರತಿಭಟನೆ
ಮುಂಡಗೋಡ 25: ಪಟ್ಟಣದ ರಜಾಕಿಯಾ ದರ್ಗಾದ ಹಿಂಭಾಗದಲ್ಲಿ ಗುರುವಾರ ಬೆಳ್ಳಂಬೆಳಿಗ್ಗೆ ಗೋ ಮಾತೇಯ ಕಡಿದು ಹತ್ಯೆ ಮಾಡಿದ್ದಾರೆ. ಗೋ ಹತ್ಯೆ ಮಾಡಿದ ಹಂತಕರಿಗೆ ಕಠಿಣ ಶಿಕ್ಷೆ ವಿಧಿಸಿ ಗಡಿ ಪಾರು ಮಾಡಬೇಕೆಂದು ಹಿಂದೂ ಸಂಘಟನೆಗಳಿಂದ ಪ್ರತಿಭಟನೆ ನಡಿಸಿದ್ದರು.
ಇಲ್ಲಿಯ ಶಿವಾಜಿ ಸರ್ಕಲ್ ನಿಂದು ಮುಂಡಗೋಡ ಪೋಲಿಸ ಠಾಣೆ ವರೆಗೂ ಪ್ರತಿಭಟಿಸಿ ಮೆರವಣಿಗೆ ನಡೆಸಿದ ಹಿಂದೂ ಸಂಘಟನೆಯವರು ಹಾಗೂ ಕಾರ್ಯಕರ್ತರು ಮೆರವಣಿಗೆಯುದ್ದಕ್ಕೂ ಗೋ ಹತ್ಯೆಯ ಹಂತಕರನ್ನು ಕೂಡಲೇ ಬಂಧಿಸಬೇಕೆಂದು ಘೋಷಣೆ ಕೂಗುತ್ತ ಗೋ ಹತ್ಯೆ ಮಾಡಿದ ಹಂತಕರನ್ನು ಕಠಿಣ ಶಿಕ್ಷೆ ವಿಧಿಸಬೇಕೆಂದು ಹಾಗೂ ಗಡಿ ಪಾರು ಮಾಡಬೇಕೆಂದು ಆಗ್ರಹಿಸಿ ಮುಂಡಗೋಡ ಸಿಪಿಐ ರಂಗನಾಥ ನೀಲಮ್ಮನವರ ಅವರಿಗೆ ಮನವಿ ಸಲ್ಲಿಸಿದರು.
ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ರಂಗನಾಥ್ ನೀಲಮ್ಮನವರ ಭರವಸೆ ನೀಡಿದರು.
ಈ ವೇಳೆಗೆ ಹಿಂದೂ ಜಾಗರಣ ವೇದಿಕೆ ತಾಲೂಕು ಸಂಚಾಲಕರು ಪ್ರಕಾಶ ಬಡಿಗೇರ, ಶಂಕರ ಲಮಾಣಿ, ಮಂಜುನಾಥ ಎಚ್.ಪಿ ತಂಗಮ್ ಚಿನ್ನನ್ ಅಯ್ಯಪ್ಪ ಭಜಂತ್ರಿ, ಫಣಿರಾಜ ಹದಳಗಿ, ಶೇಖರ ಲಮಾಣಿ, ಮಂಜುನಾಥ ಪಾಟೀಲ, ಸುರೇಶ ಕಲ್ಲೋಳ್ಳಿ, ಭರತ ಹದಳಗಿ, ಬಾಬು ವಾಲ್ಮೀಕಿ, ರಾಜೇಶರಾವ್, ಮಂಜುನಾಥ ಶೇಟ್ ನಾಗರಾಜ ಹದಳಗಿ ಸೇರಿದಂತೆ ಎಬಿವಿಪಿ ಸಂಘಟನೆಯ ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 