ಧರ್ಮದ ಕಾಲಂನಲ್ಲಿ ಹಿಂದೂ ಎಂದು ಬರೆಯಿಸಬೇಕು: ರಜಪೂತ

ಧರ್ಮದ ಕಾಲಂನಲ್ಲಿ ಹಿಂದೂ ಎಂದು ಬರೆಯಿಸಬೇಕು: ರಜಪೂತ Hindu should be written in the religion column: Rajput

ವಿಜಯಪುರ 23: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ನಡೆಸುತ್ತಿದ್ದು, ಕ್ಷತ್ರೀಯ ಸಮಾಜ ಬಾಂಧವರು ಧರ್ಮದ ಕಾಲಂನಲ್ಲಿ ಹಿಂದೂ ಎಂದು ಬರೆಯಿಸಬೇಕು ಎಂದು ವಿಜಯಪುರ ಜಿಲ್ಲಾ ಕ್ಷತ್ರೀಯ ಒಕ್ಕೂಟದ ಜಿಲ್ಲಾಧ್ಯಕ್ಷ ಪರಶುರಾಮಸಿಂಗ್ ರಜಪೂತ ಒತ್ತಾಯಿಸಿದ್ದಾರೆ.

ಕ್ಷತ್ರಿಯ ಸಮುದಾಯಗಳೆಲ್ಲರೂ ಧರ್ಮ ಕಾಲಂ ನಲ್ಲಿ ಹಿಂದೂ ಎಂದು, ಜಾತಿ ಕಾಲಂಗಳಲ್ಲಿ ಮರಾಠ, ಕಲಾಲ, ರಜಪೂತ ಬಾವುಸರ್ ಎಂದು  ತಮ್ಮ ಸಮುದಾಯಗಳ ಹೆಸರುಗಳನ್ನು ಬರೆಯಿಸಬೇಕು ಎಂದು ಅವರು ಕೋರಿದ್ದಾರೆ.