ಬಾಬರಿ ಮಸೀದಿ ದ್ವಂಸದ ವೇಳೆ ಹಿಂದೂಗಳು ತಾಲಿಬಾನಿಗಳಂತೆ ವತರ್ಿಸಿದ್ದರು: ರಾಜೀವ್ ಧವನ್
ನವದೆಹಲಿ 20: ಬಾಬರಿ ಮಸೀದಿ ದ್ವಂಸವಾಗಿದ್ದ ಡಿಸೆಂಬರ್ 6, 1992 ರಂದು "ಹಿಂದೂಗಳು ತಾಲಿಬಾನಿಗಳಂತೆ" ವತರ್ಿಸಿದ್ದರು ಎಂದು ಅಯೋಧ್ಯೆ ವಿವಾದ ಪ್ರಕರಣದಲ್ಲಿ ಮುಸ್ಲಿಮ್ ಪಕ್ಷದ ಪರ ವಕೀಲರಾದ ರಾಜೀವ್ ಧವನ್ ಹೇಳಿದ್ದಾರೆ.
ಸುಪ್ರೀಂ ಕೋಟರ್್ ನಲ್ಲಿ ಅಯೋಧ್ಯೆ ಪ್ರಕರಣ ವಿಚಾರಣೆ ನಡೆಯುತ್ತಿದ್ದ ವೇಳೆ ವಕೀಲರು ಈ ಹೇಳಿಕೆ ನಿಡಿದ್ದಾರೆ. "ಹಿಂದೂಗಳು ಅಂದು ತಾಲಿಬಾನಿಗಳಂತೆ ವತರ್ಿಸಿದ್ದರು. ಡಿಸೆಂಬರ್ 6ರಂದು ಹಿಂದೂಗಳು ನಡೆಸಿದುದು ಒಂದು ಭಯೋತ್ಪಾದನೆ ಕೃತ್ಯವೇ ಹೊರತು ಬೇರಲ್ಲ ಅವರು ಹೇಳಿದ್ದಾರೆ.
ಇದಕ್ಕೂ ಮುನ್ನ ಧವನ್ ಅಯೋಧ್ಯೆಯಲ್ಲಿನ ಬಾಬರಿ ಮಸೀದಿ ದ್ವಂಸವನ್ನು ತಾಲಿಬಾನಿಗಳು ಅಫ್ಘಾನಿಸ್ಥಾನದ ಬಮಿಯಾನ್ ಬುದ್ದನ ಪ್ರತಿಮೆಗಳ ದ್ವಂಸಕ್ಕೆ ಹೋಲಿಸಿದ್ದರು. ಅಲ್ಲದೆ ಹಿಂದೂ ತಾಲಿಬಾನಿಗಳು ಬಾಬರಿ ಮಸೀದಿಯನ್ನು ನಾಶ ಮಾಡಿದ್ದಾರೆ ಎಂದು ವಾದಿಸಿದ್ದರು.
ಡಿಸೆಂಬರ್ 1992ರ ಘಟನೆಯು "ಹಿಂದೂ ಭಯೋತ್ಪಾದನೆ"ಗೆ ಒಂದು ಉದಾಹರಣಯಾಗಲಿದೆ ಎಂದು ಅವರು ಹೇಳಿದ್ದಾರೆ.1526 ರಿಂದ 1992 ರ ಡಿಸೆಂಬರ್ 6 - ಅದನ್ನು ದ್ವಂಸ ಮಾಡುವವರೆಗೂ ಅಲ್ಲಿ ಮಸೀದಿ ಇದ್ದಿತ್ತು ಎಂದು ಅವರು ವಾದಿಸಿದ್ದಾರೆ. ಅಲ್ಲಿ ಇದಕ್ಕೂ ಮುನ್ನ ದೇವಾಲಯವಿತ್ತು ಎಂದು ನಾನು ಭಾವಿಸಲಾರೆ. ಆದರೆ ಹಿಂದೂಗಳಿಗೆ ಅಲ್ಲಿ ಪೂಜೆ ನೆರವೇರಿಸಲು ಅವಕಾಶ ನಿಡಲಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.
ಏತನ್ಮಧ್ಯೆ, ಅಯೋಧ್ಯೆಯ ವಿಷಯವನ್ನು ಸಂವಿಧಾನ ಪೀಠಕ್ಕೆ ವಗರ್ಾಯಿಸಬೇಕೆ ಅಥವಾ ಬೇಡವೆ ಎನ್ನುವ ಕುರಿತ ತೀರ್ಪನ್ನು ನ್ಯಾಯಾಲಯವು ಕಾಯ್ದಿರಿಸಿದೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 