ಅಳವಂಡಿಯಲ್ಲಿ ವೀರಗಲ್ಲು ಪತ್ತೆ ಸಂರಕ್ಷಣೆಗೆ ಇತಿಹಾಸಕಾರ ಕಲ್ಯಾಣಿ ಮನವಿ
Historian Kalyani appeals for preservation of Hero Stone found in Alavandi
ಕೊಪ್ಪಳ 05: ಜಿಲ್ಲೆಯ ಅಳವಂಡಿ ಗ್ರಾಮದಲ್ಲಿ ಕಲ್ಯಾಣ ಚಾಲುಕ್ಯರ ಕಾಲಕ್ಕೆ ಸೇರಿದ ಐತಿಹಾಸಿಕ ಮಹತ್ವ ಸಾರುವ ವೀರಗಲ್ಲು ಪಟ್ಟೆಯಾಗಿದ್ದು.ಇದನ್ನು ಇತಿಹಾಸಕಾರ ಹಾಗೂ ರಾಷ್ಟ್ರೀಯ ಸಂಶೋಧನಾ ವೇದಿಕೆಯ ಗೌರವ ಅಧ್ಯಕ್ಷ ಡಾ ಸಂಗಮೇಶ ಕಲ್ಯಾಣಿ ಅವರು ಗುರುತಿಸಿದ್ದಾರೆ.ಅಳವಂಡಿ ಗ್ರಾಮವು ಕುಂತಳ ನಾಡಿನ ಅಗ್ರಹಾರವಾಗಿತ್ತು. ಯುದ್ಧದಲ್ಲಿ ವೀರ ಮರಣ ಹೊಂದಿದ ಸಾಮಂತರು ಮತ್ತು ಸ್ಥಳೀಯ ಗಾವುಂಡರ ನೆನಪಿಗಾಗಿ ವೀರಗಲ್ಲು ಹಾಕಲಾಗಿದೆ ಎಂದು ಅವರು ತಿಳಿಸಿದ್ದಾರೆ.ಅಲ್ಲಿನ ಸ್ಥಳೀಯ ಇತಿಹಾಸವನ್ನು ಸಾರುವ ವೀರಗಲ್ಲು ಪ್ರಸ್ತುತ ಊರಿನ ಮಹಾದ್ವಾರದ ಹತ್ತಿರ ನಿಲ್ಲಿಸಿದ್ದಾರೆ. ಈಗಾಗಲೇ ಕೆಳಗಿನ ಭಾಗ ಮಣ್ಣಿನಲ್ಲಿ ಹೂತುಹೋಗಿರುವುದರಿಂದ ಐತಿಹಾಸಿಕ ಧಾಖಲೆಯೊಂದು ನಶಿಸಿ ಹೋಗುವ ಸಂಭವ ಇದ್ದು ಕೂಡಲೇ ಐತಿಹಾಸಿಕ ಪ್ರಾಮುಖ್ಯತೆ ಸಾರುವ ವೀರಗಲ್ಲನ್ನು ರಕ್ಷಣೆ ಮಾಡಲು ಸ್ಥಳೀಯ ಗ್ರಾಮ ಪಂಚಾಯತಿ ಅಧಿಕಾರಿಗಳು ಹಾಗೂ ಶಾಲಾ ಕಾಲೇಜುಗಳು ಮುಂದಾಗಬೇಕೆಂದು ಅವರು ಮನವಿ ಮಾಡಿದ್ದಾರೆ.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 