ಅಳವಂಡಿಯಲ್ಲಿ ವೀರಗಲ್ಲು ಪತ್ತೆ ಸಂರಕ್ಷಣೆಗೆ ಇತಿಹಾಸಕಾರ ಕಲ್ಯಾಣಿ ಮನವಿ
Historian Kalyani appeals for preservation of Hero Stone found in Alavandi
ಕೊಪ್ಪಳ 05: ಜಿಲ್ಲೆಯ ಅಳವಂಡಿ ಗ್ರಾಮದಲ್ಲಿ ಕಲ್ಯಾಣ ಚಾಲುಕ್ಯರ ಕಾಲಕ್ಕೆ ಸೇರಿದ ಐತಿಹಾಸಿಕ ಮಹತ್ವ ಸಾರುವ ವೀರಗಲ್ಲು ಪಟ್ಟೆಯಾಗಿದ್ದು.ಇದನ್ನು ಇತಿಹಾಸಕಾರ ಹಾಗೂ ರಾಷ್ಟ್ರೀಯ ಸಂಶೋಧನಾ ವೇದಿಕೆಯ ಗೌರವ ಅಧ್ಯಕ್ಷ ಡಾ ಸಂಗಮೇಶ ಕಲ್ಯಾಣಿ ಅವರು ಗುರುತಿಸಿದ್ದಾರೆ.ಅಳವಂಡಿ ಗ್ರಾಮವು ಕುಂತಳ ನಾಡಿನ ಅಗ್ರಹಾರವಾಗಿತ್ತು. ಯುದ್ಧದಲ್ಲಿ ವೀರ ಮರಣ ಹೊಂದಿದ ಸಾಮಂತರು ಮತ್ತು ಸ್ಥಳೀಯ ಗಾವುಂಡರ ನೆನಪಿಗಾಗಿ ವೀರಗಲ್ಲು ಹಾಕಲಾಗಿದೆ ಎಂದು ಅವರು ತಿಳಿಸಿದ್ದಾರೆ.ಅಲ್ಲಿನ ಸ್ಥಳೀಯ ಇತಿಹಾಸವನ್ನು ಸಾರುವ ವೀರಗಲ್ಲು ಪ್ರಸ್ತುತ ಊರಿನ ಮಹಾದ್ವಾರದ ಹತ್ತಿರ ನಿಲ್ಲಿಸಿದ್ದಾರೆ. ಈಗಾಗಲೇ ಕೆಳಗಿನ ಭಾಗ ಮಣ್ಣಿನಲ್ಲಿ ಹೂತುಹೋಗಿರುವುದರಿಂದ ಐತಿಹಾಸಿಕ ಧಾಖಲೆಯೊಂದು ನಶಿಸಿ ಹೋಗುವ ಸಂಭವ ಇದ್ದು ಕೂಡಲೇ ಐತಿಹಾಸಿಕ ಪ್ರಾಮುಖ್ಯತೆ ಸಾರುವ ವೀರಗಲ್ಲನ್ನು ರಕ್ಷಣೆ ಮಾಡಲು ಸ್ಥಳೀಯ ಗ್ರಾಮ ಪಂಚಾಯತಿ ಅಧಿಕಾರಿಗಳು ಹಾಗೂ ಶಾಲಾ ಕಾಲೇಜುಗಳು ಮುಂದಾಗಬೇಕೆಂದು ಅವರು ಮನವಿ ಮಾಡಿದ್ದಾರೆ.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 