ಇತಿಹಾಸ, ಸಂಸ್ಕೃತಿ ಗಮನಿಸಿ ಸುಪ್ರೀಂ ಕೋರ್ಟ್ ತೀಪು ನೀಡಿದೆ : ಸಿದ್ದಲಿಂಗ ಸ್ವಾಮೀಜಿ
ತುಮಕೂರು,ನ 09 : ಸಂವಿಧಾನದ ಪೀಠ ಸುದೀರ್ಘ ವಿಚಾರಣೆ ಮಾ ಡಿ,ದಾಖಲೆ ನೋಡಿ ಇತಿಹಾಸ ಸಂಸ್ಕೃತಿ ಗಮನಿಸಿ ತೀಪು ನೀಡಿದೆ.ಬಹಳ ದಿನಗಳ ಸಮಸ್ಯೆಯಾಗಿದ್ದು ಅಂತಿಮವಾಗಿ ವಿವಾದಕ್ಕೆ ತೆರೆ ಎಳೆದಿರುವುದು ಶ್ಲಾಘ ನೀಯ ಎಂದು ಸಿದ್ದಗಂಗಾ ಮಠದ ಪೀಠಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ಸೋಲು ಗೆಲುವಿನ ಪ್ರಶ್ನೆ ಅಲ್ಲ,ವಿವಾದ ತೀರ್ಮಾನಾಗಿರುವುದು ಸಂತೋಷದ ಸಂಗತಿ.ನಾವು ನ್ಯಾಯ ಲಯದ ತೀರ್ಪನ್ನು ಗೌರವಿಸುತ್ತೇವೆ.ಅದು ಪರ ವಿರೋಧ ವಿಚಾರವಲ್ಲ.ನ್ಯಾಯಾ ಲಯ ಎಲ್ಲವನ್ನು ಗಮನಿಸಿ ಸಂವಿಧಾನದ ಪೂರ್ಣ ಪೀಠ ಇದನ್ನು ಒಪ್ಪಿ ತೀರ್ಮಾನ ಕೊಟ್ಟಿದೆ ಎಂದರು. ಸುಪ್ರೀಂ ಕೋರ್ಟ್ ತೀರ್ಪುಗೆ ಅಪಸ್ವರ ಬರದಂತೆ ಎಲ್ಲವನ್ನು ಸಮಾನವಾಗಿ ಸ್ವೀಕ ರಿಸಿ,ಗೌರವಿಸಿ ಶಾಂತಿ ಸಮಧಾನದಿಂದ ಇರಬೇಕು.ಎಲ್ಲಾ ಧರ್ಮಕ್ಕೂ ಜಾತಿಗೂ ಅವಕಾಶ ನೀಡಿರುವುದು ಭಾರತ.ನಮ್ಮ ದೇಶಕ್ಕೆ,ವಿಶ್ವಕ್ಕೆ ಶಾಂತಿ ಬಯಸುತ್ತದೆ. ಸುಪ್ರೀಂ ಕೋರ್ಟ್ ತೀರ್ಪನ್ನು ಎಲ್ಲಾರು ಎತ್ತಿ ಹಿಡಿಯೋಣ, ಸ್ವಾಗತಿಸೋಣ. ಸೌಹಾರ್ದತೆಯಿಂದ ಜೀವನ ನಡೆಸೋಣ. ಇವರು ಪೂಜೆ ಮಾಡ್ತಾರೆ. ಅವರು ಪ್ರಾರ್ಥನೆ ಮಾಡುತ್ತಾರೆ ಅಷ್ಟೆ ಎಂದು ತಿಳಿಸಿದರು.
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ 