ಉನ್ನತ ಹುದ್ದೆ ಅಲಂಕರಿಸಿ : ಸುಧಾಕರ ದೈವಜ್ಞ
Hold a high position said Sudhakar Daivagya
ಶಿಗ್ಗಾವಿ 18: ನಮ್ಮ ಸಮಾಜದ ವಿದ್ಯಾರ್ಥಿಗಳು ಉನ್ನತ ಹುದ್ದೆಯನ್ನು ಅಲಂಕರಿಸಬೇಕು ಎಂದು ದೈವಜ್ಞ ಸಮಾಜ ಅಧ್ಯಕ್ಷ ಸುಧಾಕರ ದೈವಜ್ಞ ಹೇಳಿದರು.
ಪಟ್ಟಣದ ವಿಠ್ಠಲ ದೇವಸ್ಥಾನದಲ್ಲಿ ನಡೆದ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು ಎಲ್ಲ ಸಮಾಜದವರು ಮುಖ್ಯವಾಹಿನಿಗೆ ಬಂದಿದ್ದಾರೆ ದೈವಜ್ಞ ಸಮಾಜ ಮುಂದೆ ಬರುವ ಅನಿವಾರ್ಯತೆ ಇದೆ ಎಂದು ಮಾರ್ಮಿಕವಾಗಿ ಹೇಳಿದರು. ಮಾಜಿ ಅಧ್ಯಕ್ಷ ಪ್ರಕಾಶ ವೇರ್ಣೆಕರ ಮಾತನಾಡಿ ಸಮಾಜದಲ್ಲಿ ಸಂಘಟನೆ ಪ್ರಮುಖವಾಗಿದೆ ಆದ್ದರಿಂದ ಸಂಘಟನೆ ಮುಖಾಂತರ ಎಲ್ಲ ಕಾರ್ಯಗಳನ್ನು ನಿರ್ವಹಿಸಬಹುದು ಎಂದರು. ಎಸ್.ಎಸ್.ಎಲ್.ಸಿ ಹಾಗೂ ಪಿ.ಯು.ಸಿ ಯಲ್ಲಿ ಹೆಚ್ಚು ಅಂಕಗಳಿಸಿದ ಸಮಾಜದ ವಿದ್ಯಾರ್ಥಿಗಳಾದ ಅಮೃತಾ ಪಾಲನಕರ, ರಾಧಿಕಾ ಶೇಜವಾಡಕರ, ಅಣ್ಣಯ್ಯ ಶೇಜವಾಡಕರ, ಕಾವ್ಯಾ ಕುರ್ಡೇಕರ ಅವರನ್ನು ಗೌರವಿಸಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಭೂದಾನಿ ವಾಸುದೇವ ರಾಯ್ಕರ, ಚಂದ್ರಕಾಂತ ಪಾಲನಕರ, ದತ್ತಣ್ಣಾ ವೇರ್ಣೇಕರ, ವಿನಾಯಕ ರಾಯ್ಕರ, ಮೋಹನ ರಾಯ್ಕರ, ಪ್ರಕಾಶ ಪಾಲನಕರ, ಸಂಕೇತ ರಾಯ್ಕರ್, ಮಂಜುನಾಥ ವೇರ್ಣೆಕರ, ಆನಂದ ವೇರ್ಣೆಕರ, ಜಗದೀಶ ಶೇಜವಾಡಕರ, ನಾಗೇಶ ರಾಯ್ಕರ, ಸಂತೋಷ ರಾಯ್ಕರ್, ನಾಗರಾಜ ರಾಯ್ಕರ್, ವಿನೋದಾ ಕುರ್ಡೇಕರ, ಭೂಷಣ ರೇವಣಕರ, ರಾಘವೇಂದ್ರ ದೈವಜ್ಞ, ಗಣೇಶ ಕುಡತರಕರ ಸೇರಿದಂತೆ ಸಮಾಜದ ಪ್ರಮುಖರು ಉಪಸ್ಥಿತರಿದ್ದರು. ರಾಯೇಶ್ವರ ರಾಯ್ಕರ ಕಾರ್ಯಕ್ರಮ ನಿರ್ವಹಿಸಿದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 