ಪಟ್ಟಣಕ್ಕೆ ಗೃಹ ಸಚಿವ ಡಾ. ಜಿ. ಪರಮೇಶ್ವರ ಭೇಟಿ
Home Minister Dr. G. Parameshwara visits the town
ಯರಗಟ್ಟಿ 26: ಪಟ್ಟಣಕ್ಕೆ ಗೃಹ ಸಚಿವ ಡಾ. ಜಿ. ಪರಮೇಶ್ವರ ಭೇಟಿ ನೀಡಿದರು.ಈ ವೇಳೆ ತಾಲೂಕಿನ ಸಮಸ್ತ ನಾಗರಿಕರು ದಲಿತ ಮುಖಂಡರು, ರೈತರು ಅದ್ದೂರಿಯಾಗಿ ಸ್ವಾಗತಿಸಿದರು.ಕರ್ನಾಟಕ ರಕ್ಷಣಾ ವೇದಿಕೆ, ದಲಿತಪರ ಸಂಘಟನೆಗಳು, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಪತ್ರಿಕಾ ಮಾಧ್ಯಮದವರು, ನ್ಯಾಯವಾದಿಗಳ ಸಂಘ ಮಾಜಿ ಸೈನಿಕರ ಸಮನ್ವಯ ಸಮಿತಿ ಕೂಲಿ ಕಾರ್ಮಿಕರ ಸಂಘಟನೆಗಳ ನೇತೃತ್ವದಲ್ಲಿ ಪೊಲೀಸ್ ಠಾಣೆಯನ್ನು ಶೀಘ್ರದಲ್ಲಿ ಪ್ರಾರಂಭಿಸಬೇಕು ಎಂದು ಮನವಿ ಸಲ್ಲಿಸಿದರು.ಈ ವೇಳೆ ಕರವೇ ಅಧ್ಯಕ್ಷ ರಫೀಕ ಡಿ.ಕೆ. ದಲಿತ ಮುಖಂಡ ಸಂತೋಷ ಚನ್ನಮೇತ್ರಿ, ಸುರೇಶ್ ಭಜಂತ್ರಿ, ವಿಠ್ಠಲಗೌಡ ದೇವರಡ್ಡಿ, ಅರುಣ ನೀಲಪ್ಪನ್ನವರ, ಫಾರುಕ್ ಅತ್ತಾರ, ಅಬಿದಬೇಗ ಜಮಾದಾರ, ಪೀರೋಜ ಖಾದ್ರಿ, ಮಂಜುನಾಥ ಬಾವಿಹಾಳ, ಸೋಮು ರೈನಾಪೂರ, ಮಂಜುನಾಥ ಸಿದ್ದನಗೌಡ, ಹಸೇನಸಾಬ ಹುಸೇನಾಯ್ಕರ, ಸೂರಜ ಸಂಗೋಳ್ಳಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.26 ಯರಗಟ್ಟಿ 01ಪೋಟೋ ಶೇಷಿಕೆಹೇಳಿಕೆ: ಯರಗಟ್ಟಿ ತಾಲೂಕಿಗೆ ಈಗಾಗಲೇ ಪೊಲೀಸ್ ಠಾಣೆಯನ್ನು ಮಂಜುರಾತಿ ಮಾಡಲಾಗಿದೆ ಆದರೆ ಫೈನಾನ್ಸಿಯಲ್ ಹಂತದಲ್ಲಿದ್ದು ಡಿಸೆಂಬರ್ ತಿಂಗಳಲ್ಲಿ ನೂತನ ಪೊಲೀಸ್ ಠಾಣೆ ಪ್ರಾರಂಭ ಮಾಡುವುದಾಗಿ ಶಾಸಕ ವಿಶ್ವಾಸ ವೈದ್ಯ ಅವರ ಜೋತೆ ಮಾತನಾಡಿದ್ದೆನೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 