ಮನೆ-ಮನೆಗೆ ದಿನಸಿ ಕಿಟ್ ವಿತರಣೆ
ಲೋಕದರ್ಶನ ವರದಿ
ಕೊಪ್ಪಳ 08: ಕೊರೊನಾ ವೈರಾಣು ವ್ಯಾಪಕವಾಗಿ ಹರಡುತ್ತಿರುವುದರಿಂದ ತಡೆಗಟ್ಟುವ ನಿಮಿತ್ತ ರಾಜ್ಯ ಸೇರಿದಂತೆ ಇಡೀ ದೇಶವೇ ಲಾಕ್ಡೌನ್ ಘೋಷಣೆಯಾಗಿರುವುದರಿಂದ ಸಂಪೂರ್ಣ ಸ್ತಬ್ಧವಾಗಿದೆ. ಲಾಕ್ಡೌನ್ ಹಿನ್ನಲೆಯಲ್ಲಿ ಬುಧುವಾರ ಕೊಪ್ಪಳ ನಗರದ 5, 12, 22ನೇ ವಾಡರ್್ನಲ್ಲಿ ಕಿರ್ಲೊಸ್ಕರ್ ಕಂಪನಿವತಿಯಿಂದ ಬಡಜನರಿಗೆ ಆಹಾರ ಧಾನ್ಯದ ಕಿಟ್ ವಿತರಿಸಿದರು. ಲಾಕ್ಡೌನ್ನಿಂದ ಯಾರೂ ಮನೆಯಿಂದ ಹೊರಬರದಂತೆ ಆದೇಶಿಸಲಾಗಿದ್ದು, ಸಾರ್ವಜನಿಕರು ದಿನಬಳಕೆ ವಸ್ತುಗಳ ಖರೀದಿಗೆ ಪರಿತಪಿಸುವಂತಾಗಿದೆ. ಇಂತಹ ಕಷ್ಟಕರ ಪರಿಸ್ಥಿತಿಯಲ್ಲಿ ಕೊಪ್ಪಳ ನಗರದ 5,12 ಮತ್ತು 22ನೇ ವಾಡರ್್ನಲ್ಲಿ ಕಿರ್ಲೊಸ್ಕರ್ ಕಂಪನಿ ಸ್ವಂತ ಖಚರ್ಿನಲ್ಲಿ ವಾಡರ್್ನ ಮನೆಗಳಿಗೆ ಉಚಿತವಾಗಿ ಆಹಾರ ಧಾನ್ಯ ಕಿಟ್ಗಳನ್ನು ಹಂಚಿರುವುದು ವಾರ್ಡ್ ಜನರಮೆಚ್ಚುಗೆಗಳಿಸಿದೆ. ಕೂಲಿ ಕಾಮರ್ಿಕರೇ ಹೆಚ್ಚಿನ ಸಂಖ್ಯೆಯಲ್ಲಿರುವ ಈ ವಾಡರ್್ನ ಜನರು ಲಾಕ್ಡೌನ್ ದಿನಗಳಿಂದ ಕೆಲಸವಿಲ್ಲದೆ, ದುಡ್ಡು ಇಲ್ಲದೆ ಮನೆಯಲ್ಲಿ ಕುಳಿತು ಪರಿತಪಿಸುವಂತಹ ಸ್ಥಿತಿ ನಿರ್ಮಾಣವಾಗಿತ್ತು. ಇದನ್ನು ಮನಗಂಡ ದಿನಸಿ ಕಿಟ್ ಹಂಚಿರುವುದು ಎಲ್ಲಾರಲ್ಲಿ ಮೆಚ್ಚುಗೆ ಪಾತ್ರವಾಗಿದೆ. ಈ ವೇಳೆ ಕಿಲರ್ೊಸ್ಕರ್ ಕಂಪನಿಯ ಉದಯ ಕುಲಕರ್ಣಿ, ಮನೋಜ ಶ್ರೀನಿವಾಸ, ನಗರ ಠಾಣೆಯ ಸಿಪಿಐ ಮೌನೇಶ್ ಪಾಟೀಲ್ ಸೇರಿದಂತೆ ಇತರರು ಇದ್ದರು.
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ 