ಪ್ರಾಮಾಣಿಕ ಅಧ್ಯಯನವೇ ಯಶಸ್ಸಿನ ಸೂತ್ರ: ಮೇಯರ್ ಪ್ರೀತಿ ಕಾಮಕರ
Honest study is the formula for success: Mayor Preeti Kamakara
ಬೆಳಗಾವಿ 15: ವಿದ್ಯಾರ್ಥಿಗಳು ಕಠಿಣ ಪರಿಶ್ರಮ ಮತ್ತು ಪ್ರಾಮಾಣಿಕ ಅಧ್ಯಯನದ ಮೂಲಕ ಶೈಕ್ಷಣಿಕ ಜೀವನವನ್ನು ಯಶಸ್ವಿಗೊಳಿಸಬೇಕೆಂದು ಮಹಾನಗರ ಪಾಲಿಕೆಯ ಮೇಯರ ಪ್ರೀತಿ ಕಾಮಕರ ಹೇಳಿದರು.
ನಗರದ ಖಾಸಭಾಗ ಉಪ್ಪಾರ ಬೀದಿಯ ಬನಶಂಕರಿ ದೇವಸ್ಥಾನ ದೇವಾಂಗ ಸಮಾಜ ಟ್ರಸ್ಟ್ ಹಾಗೂ ಗಾಯತ್ರಿ ಸೇವಾ ಪ್ರತಿಷ್ಠಾನದಿಂದ ಭಾನುವಾರ ಆಯೋಜಿಸಲಾಗಿದ್ದ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ಮೊಬೈಲ್ ಸೇರಿದಂತೆ ಆಧುನಿಕತೆಯ ಆಕರ್ಷಣೆಗೆ ಒಳಗಾಗದೆ ಉತ್ತಮ ನಡುವಳಿಕೆ ಹಾಗೂ ಗುರು ಹಿರಿಯರನ್ನು ಗೌರವಿಸುವ ನಯ ವಿನಯಪೂರಿತ ಉತ್ತಮ ಸಂಸ್ಕಾರ ಮೈಗೂಡಿಸಿಕೊಳ್ಳಬೇಕೆಂದು ಹೇಳಿದರು.
ಸಮಾರಂಭದಲ್ಲಿ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಹಾಗೂ ಸಮಾಜದ ಸಾಧಕರನ್ನು ಸನ್ಮಾನಿಸಿ ಗೌರವಿಸಲಾಯಿತು.
ವಿವಿಧ ಗಣ್ಯರು ಹಾಗೂ ಟ್ರಸ್ಟ್ ಪದಾಧಿಕಾರಿಗಳು, ಹಾಗೂ ಸಮಾಜದ ಬಾಂಧವರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 