ಹಾಂಕಾಂಗ್ ಓಪನ್: ಸೆಮಿಫೈನಲ್ಗೆ ಕಿಡಂಬಿ ಶ್ರೀಕಾಂತ್
ಹಾಂಕಾಂಗ್, ನ 15 : ಗೆಲುವಿನ ಲಯ ಮುಂದುವರಿಸಿರುವ ಭಾರತದ ಅಗ್ರ ಕ್ರಮಾಂಕದ ಬ್ಯಾಡ್ಮಿಂಟನ್ ಆಟಗಾರ ಕಿಡಂಬಿ ಶ್ರೀಕಾಂತ್ ಅವರು ಇಲ್ಲಿ ನಡೆಯುತ್ತಿರುವ ಹಾಂಕಾಂಗ್ ಓಪನ್ ಟೂರ್ನಿಯ ಪುರುಷರ ಸಿಂಗಲ್ಸ್ ನಲ್ಲಿ ಸೆಮಿಫೈನಲ್ಸ್ ತಲುಪಿದ್ದಾರೆ.
ಶುಕ್ರವಾರ ನಡೆದ ಪುರುಷರ ಸಿಂಗಲ್ಸ್ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಅತ್ಯುತ್ತಮ ಪ್ರದರ್ಶನ ತೋರಿದ ಕಿಡಂಬಿ ಶ್ರೀಕಾಂತ್ ಮೊದಲನೇ ಸೆಟ್ನಲ್ಲಿ 21-13 ಅಂತರದಲ್ಲಿ ಚೀನಾದ ಚೆನ್ ಲಾಂಗ್ ವಿರುದ್ಧ ಜಯ ಸಾಧಿಸಿದ್ದರು. ಈ ವೇಳೆ ಚೀನಾ ಆಟಗಾರ ಗಾಯದಿಂದಾಗಿ ಪಂದ್ಯವನ್ನು ವಿಥ್ಡ್ರಾ ಮಾಡಿಕೊಂಡರು ಇದರ ಲಾಭ ಪಡೆದ ಕಿಡಂಬಿ ಅಂತಿಮ ನಾಲ್ಕರ ಘೆಟ್ಟಕ್ಕೆ ಲಗ್ಗೆ ಇಟ್ಟಿದ್ದಾರೆ.
ಪ್ರಸ್ತುತ ನಡೆಯುತ್ತಿರುವ ಹಾಂಕಾಂಗ್ ಓಪನ್ ಟೂರ್ನಿಯಲ್ಲಿ ಕಿಡಂಬಿ ಶ್ರೀಕಾಂತ್ ಅವರಿಗೆ ಅದೃಷ್ಟ ಚೆನ್ನಾಗಿದೆ. ಟೂರ್ನಿಯ ಮೊದಲನೇ ಸುತ್ತಿನಲ್ಲೇ ವಿಶ್ವದ ಅಗ್ರ ಶ್ರೇಯಾಂಕಿತ ಕೆಂಟೊ ಮೊಮೊಟಾ ಅವರ ವಿರುದ್ಧ ಸೆಣಸಬೇಕಾಗಿತ್ತು. ಆದರೆ, ಅವರು ಅನಿರೀಕ್ಷಿತವಾಗಿ ಹಾಂಕಾಂಗ್ ವಿಥ್ಡ್ರಾ ಮಾಡಿಕೊಂಡಿದ್ದರು. ಇದರ ಲಾಭ ಪಡೆದ ಶ್ರೀಕಾಂತ್ ಎರಡನೇ ಸುತ್ತಿಗೆ ಪ್ರವೇಶ ಮಾಡಿದ್ದರು.
ನಿನ್ನೆಯೆಷ್ಟೆ ವಿಶ್ವ ಚಾಂಪಿಯನ್ ಪಿ.ವಿ ಸಿಂಧು ಅವರು ಎರಡನೇ ಸುತ್ತಿನಲ್ಲಿ ಥಾಯ್ಲೆಂಡ್ ನ ಬುಸನಾನ್ ವಿರುದ್ಧ 21-18, 11-21, 21-16 ಅಂತರದಲ್ಲಿ ಸೋಲು ಅನುಭವಿಸಿದ್ದರು. ಪರುಪಳ್ಳಿ ಕಶ್ಯಪ್ ಅವರು ಚೈನೀಸ್ ತೈಫೆಯ ಚೌ ಟೀನ್-ಚೆನ್ ಅವರ ವಿರುದ್ಧ ಸೋಲು ಅನುಭವಿಸಿದ್ದರು.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 