ಹೊನ್ನಾವರ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆ
Honnavar Taluk Guarantee Scheme Implementation Committee Meeting
ಹೊನ್ನಾವರ 22 : ತಾಲೂಕು ಯೋಜನೆಗಳ ಅನುಷ್ಠಾನ ಸಮಿತಿ ಸಭೆಯು, ಹೊನ್ನಾವರ ತಾಲೂಕು ಪಂಚಾಯತ್ ಸಭಾಭವನದಲ್ಲಿ ಗುರುವಾರ ನಡೆಯಿತು. ಸಭೆಯಲ್ಲಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅಣ್ಣಪ್ಪ ಎಮ್ ನಾಯ್ಕ ಮಾತನಾಡಿ ಮಳೆಗಾಲದಲ್ಲಿ ಸಮರ್ಕ ವಿದ್ಯುತ್ ಪೂರೈಕೆ ಹಾಗೂ ಅಪಘಾತಗಳು ಸಂಭವಿಸದ ರೀತಿ ಕೆಲಸ ನಿರ್ವಹಿಸಲು ವಿದ್ಯುತ್ ಅಧಿಕಾರಿಗಳಿಗೆ ಸೂಚಿಸಿದರು.
ಬಾಕಿ ಇರುವ ಪಲಾನುಭವಿಗಳ ಕೆವೈಸಿ, ಏನ್ ಪಿಸಿಐ ಪೂರ್ಣ ಗೊಳಿಸಲು ಆಹಾರ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಧಿಕಾರಿಗಳಿಗೆ ಸೂಚಿಸಿದರು. ಆಹಾರ ದಾಸ್ತಾನು ಕೊಠಡಿ, ರೇಷನ್, ಸೀಮೆಎಣ್ಣೆ ವಿತರಣೆ ಕುರಿತು ಮಾಹಿತಿ ಪಡೆದು ಸಮರ್ಕ ವಿತರಣೆಗೆ ಸೂಚಿಸಿದರು. ಸರಕಾರದ ಗ್ಯಾರಂಟಿ ಯೋಜನೆಗಳು ಬಡ ಜನರ ಉತ್ಸಾಹ ಹೆಚ್ಚಿಸಿದೆ ಎಂದರು. ಆಹಾರ, ಸಾರಿಗೆ, ವಿದ್ಯುತ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಧಿಕಾರಿಗಳು ಉಪಸ್ಥಿರಿದ್ದು ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಶಕ್ತಿ, ಗೃಹಜ್ಯೋತಿ, ಗೃಹಲಕ್ಷ್ಮೀ, ಯುವನಿಧಿ ಕಾರ್ಯಕ್ರಮಗಳ ಪ್ರಗತಿ ವರದಿ ನೀಡಿದರು.
ಸಭೆಯಲ್ಲಿ ಗ್ಯಾರಂಟಿ ಸಮಿತಿ ಕಾರ್ಯದರ್ಶಿ ಹಾಗೂ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಪುಟ್ಟೇ ಗೌಡ, ಸಮಿತಿ ಸದಸ್ಯರುಗಳಾದ ಗಣಪತಿ ಹಳ್ಳೆರ್, ಕೃಷ್ಣ ಮಾರಿಮನೆ, ಮಾರುತಿ ಮೊಗೇರ್, ಜೈನಾಭಿ ಸಾಬ್, ಗಣಪತಿ ಗೌಡ, ಆದರ್ಶ್ ನಾಯ್ಕ, ನಾರಾಯಣ ಭಟ್, ಮಂಜು ನಾಯ್ಕ, ವಿಭಾ ಗಾವಂಕರ, ಮಾದೇವ ಗೌಡ, ಜಗದೀಶ್ ನಾಯ್ಕ, ಅಭಿಷೇಕ್ ತಾಂಡೇಲ್, ಗುರುರಾಜ್ ನಾಯ್ಕ ಉಪಸ್ಥಿತರಿದ್ದರು. ತಾಲೂಕು ಪಂಚಾಯತ್ ವ್ಯವಸಸ್ಥಾಪಕ ರಾಮ ಭಟ್ ಸ್ವಾಗತಿಸಿ ವಂದಿಸಿದರು..
ಭೀಕರ ಅಪಘಾತಕ್ಕೆ ಓರ್ವ ಸಾವು : ಮೂವರಿಗೆ ಗಂಭೀರ ಗಾಯ
ಶವ ವಾಹನದಲ್ಲಿ ಹಾಳಾದ ಸ್ಟ್ರೆಚರ್ : ಶವ ಸಾಗಿಸಲು ನಾಗರಿಕರ ಪರದಾಟ : ಸ್ಟ್ರೆಚರ್ ಖರೀದಿಗೆ ಪುರಸಭೆಯಲ್ಲಿ ದುಡ್ಡು ಇಲ್ಲವಾ?
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್
ಒಳಚರಂಡಿಗೆ ನುಗ್ಗುತ್ತಿದೆ ಮಳೆಯ ನೀರು : ಗಲ್ಲಿಯಲ್ಲಾ ಗಬ್ಬು ವಾಸನೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಹಿಡಿಶಾಪ
ಭಾರಿ ಮಳೆ, ಗಾಳಿಯಿಂದ ಹಾರಿಹೋದ ಸರ್ಕಾರಿ ಶಾಲೆಗಳ ಮೇಲ್ಚಾವಣಿ : ಮರ ಕಂಬಗಳು ಧರೆಗೆ
ಅಗಲಿದ ಅನಾಥನಿಗೆ ಅಗ್ನಿಸ್ಪರ್ಶ ಮಾಡಿ ಆಪತ್ಭಾಂದವನಾದ ವಿಜಯ ಮೋರೆ: ಅಂತ್ಯಕ್ರಿಯೆಗೆ ಮಾರ್ಕೆಟ್ ಪೊಲೀಸರ ಸಾಥ್ 