ಪದಕ ವಿಜೇತರಿಗೆ ಬಹುಮಾನ ನೀಡಿ ಸನ್ಮಾನಿಸಿದ ಸಕರ್ಾರ
ನವದೆಹಲಿ 05: ಜಕಾತರ್್ ನಲ್ಲಿ ಇತ್ತೀಚಿಗೆ ನಡೆದ ಏಷ್ಯನ್ ಗೇಮ್ಸ್ - 2018 ರ 18 ನೇ ಆವೃತ್ತಿಯಲ್ಲಿ ಪದಕ ವಿಜೇತರಿಗೆ ಕೇಂದ್ರ ಸಕರ್ಾರದ ವತಿಯಿಂದ ಇಂದು ನಗದು ಬಹುಮಾನ ಮಾಡಿ ಸನ್ಮಾನಿಸಲಾಯಿತು.
ಚಿನ್ನದ ಪದಕ ವಿಜೇತರಿಗೆ 40 ಲಕ್ಷ ರೂ. ಬೆಳ್ಳಿ ಹಾಗೂ ಕಂಚು ಪದಕ ವಿಜೇತರಿಗೆ ಕ್ರಮವಾಗಿ 20, ಹಾಗೂ 10 ಲಕ್ಷ ರೂ. ಬಹುಮಾನ ನೀಡಲಾಯಿತು.
ಈ ಬಾರಿಯ ಏಷ್ಯನ್ ಗೇಮ್ಸ್ ನಲ್ಲಿ ಭಾರತ 15 ಚಿನ್ನ, 24 ಬೆಳ್ಳಿ, ಹಾಗೂ 30 ಕಂಚಿನ ಪದಕ ಭೇಟಿಯಾಡುವ ಮೂಲಕ ಪದಕಗಳ ಪಟ್ಟಿ ರಾಷ್ಟ್ರಗಳ ಪೈಕಿ 8 ನೇ ಸ್ಥಾನದಲ್ಲಿದೆ.
ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್, ಕ್ರೀಡಾ ಸಚಿವ ರಾಜ್ಯವರ್ಧನ್ ಸಿಂಗ್ ರಾಥೋರ್, ಭಾರತೀಯ ಒಲಿಂಪಿಕ್ಸ್ ಅಸೋಸಿಯೇಷನ್ ಅಧ್ಯಕ್ಷ ನಾರಿಂದರ್ ಬಾತರ್ಾ ಮತ್ತಿತರರು ಸಮಾರಂಭದಲ್ಲಿ ಪಾಲ್ಗೊಂಡಿದ್ದರು.
ಎಲ್ಲಾ ಪದಕ ವಿಜೇತರನ್ನು ಅಭಿನಂದಿಸಿದ ರಾಜನಾಥ್ ಸಿಂಗ್, ಕ್ರೀಡಾಕ್ಷೇತ್ರದಲ್ಲಿ ಭಾರತ ಜಗತ್ತಿನಲ್ಲಿಯೇ ಸೂಪರ್ ಪವರ್ ರಾಷ್ಟ್ರವಾಗಿ ಹೊರಹೊಮ್ಮುವ ಕಾಲ ದೂರವಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಭಾರತದ ಆಥ್ಲೀಟ್ ಗಳ ಪ್ರದರ್ಶನ ನೋಡಿ ನಾನೇ ಬೆರಗಾಗಿದ್ದೇನೆ. ಭಾರತ ಆಥರ್ಿಕವಾಗಿ ಮಾತ್ರವಲ್ಲ, ಕ್ರೀಡೆಯಲ್ಲೂ ಸೂಪರ್ ಪವರ್ ರಾಷ್ಟ್ರವಾಗಿ ಹೊರಹೊಮ್ಮಲಿದೆ ಎಂದರು. ಅಲ್ಲದೇ, ದೇಶದಲ್ಲಿ ಕ್ರೀಡೆ ಅಭಿವೃದ್ದಿಯಲ್ಲಿ ಸಚಿವ ರಾಥೋರ್ ಅವರ ಬದ್ದತೆಯನ್ನು ರಾಜನಾಥ್ ಸಿಂಗ್ ಶ್ಲಾಘಿಸಿದರು.
ಕ್ರೀಡೆ ಬಗ್ಗೆಗಿನ ರಾಥೋರ್ ಅವರ ಬದ್ದತೆಯನ್ನು ಹೋಲಿಕೆ ಮಾಡಲು ಸಾಧ್ಯವಿಲ್ಲ. ಅವರ ಬದ್ದತೆಗೆ ಪ್ರತಿಯೊಬ್ಬ ಭಾರತೀಯರು ಹೆಮ್ಮೆಪಡಬೇಕು ಎಂದು ರಾಜನಾಥ್ ಸಿಂಗ್ ಮೆಚ್ಚುಗೆ ವ್ಯಕ್ತಪಡಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 