ವಿಶ್ವಕರ್ಮ ನೌಕರರ ಕ್ಷೇಮಾಭಿವೃದ್ಧಿ ಸಂಘದಿಂದ ಸನ್ಮಾನ

ವಿಶ್ವಕರ್ಮ ನೌಕರರ ಕ್ಷೇಮಾಭಿವೃದ್ಧಿ ಸಂಘದಿಂದ ಸನ್ಮಾನ Honored by Vishwakarma Employees' Welfare Development Association

ಗದಗ 21: ನಗರದ ವಿಶ್ವಕರ್ಮ ಸಮುದಾಯ ಭವನದಲ್ಲಿ ಜಿಲ್ಲಾ ವಿಶ್ವಕರ್ಮ ನೌಕರರ ಕ್ಷೇಮಾಭಿವೃದ್ಧಿ ಸಂಘ ಹಾಗೂ ಅಂಗ ಸಂಸ್ಥೆಗಳ ವತಿಯಿಂದ ರವಿವಾರ ನಗರದ ವಿಜಯನಗರ ಬಡಾವಣೆಯ ವಿಶ್ವಕರ್ಮ ಸಮುದಾಯ ಭವನದಲ್ಲಿ ಹಮ್ಮಿಕೊಂಡಿದ್ದ 2026 ರ ದಿನದರ್ಶಿಕೆ ಬಡುಗಡೆ ಹಾಗೂ ಸನ್ಮಾನ ಸಮಾರಂಭದಲ್ಲಿ ಗದಗ ಶ್ರೀಕಾಳಿಕಾದೇವಿ ದೇವಸ್ಥಾನ ಟ್ರಸ್ಟ್‌ ನೂತನ ಅಧ್ಯಕ್ಷರಾದ ಉಮೇಶ ಕೆ. ಅರ್ಕಸಾಲಿ, ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಚುನಾವಣೆಯಲ್ಲಿ ಜಯಗಳಿಸಿದ ಪತ್ರಕರ್ತ ಮೌನೇಶ ಸಿ. ಬಡಿಗೇರ(ನರೇಗಲ್ಲ), ಸುವರ್ಣ ಟಿವಿ ವರದಿಗಾರ ಗೀರೀಶ ಕಮ್ಮಾರ ಮತ್ತು ಅರ್‌. ಕನ್ನಡ ಟಿವಿ ವರದಿಗಾರ ಮಂಜುನಾಥ ಪತ್ತಾರ ಇವರನ್ನು ಸನ್ಮಾನಿಸಲಾಯಿತು.  ಚಿಕ್ಕುಂಬಿಯ ನಾಗಲಿಂಗೇಶ್ವರ ಮಠದ ಶ್ರೀ ಅಭಿನವ ನಾಗಲಿಂಗ ಮಹಾಸ್ವಾಮೀಜಿ, ವಿಶ್ವಕರ್ಮ ಸುಮುದಾಯಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಸುಜ್ಞಾನಮೂರ್ತಿ ಪಿ., ಪ್ರಮುಖರಾದ ಬಾಬು ಪತ್ತಾರ, ಈಶ್ವರಾಚಾರ್ಯ ಎಂ. ಪಿ., ರಾಜಗೋಪಾಲ ಡಿ. ಕಡ್ಲಿಕೊಪ್ಪ, ಎ. ಎನ್‌. ಬಡಿಗೇರ,  ಕೆ. ಎಸ್‌. ಬಡಿಗೇರ, ಬಿ. ಎಂ. ಬಡಿಗೇರ, ಸೇರಿದಂತೆ ಗಣ್ಯರು ಇದ್ದರು.