ಸಾಧನೆಗೈದ ವಿದ್ಯಾರ್ಥಿಗಳಿಗೆ ಸನ್ಮಾನ
Honoring accomplished students
ಲೋಕದರ್ಶನ ವರದಿ
ಧಾರವಾಡ 30: ಧಾರವಾಡ ಶಹರ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದಲ್ಲಿ 2025-26 ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಸನ್ಮಾನಿಸಿ, ಅಭಿನಂದಿಸಲಾಯಿತು.
ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ರಾಮಕೃಷ್ಣ ಸದಲಗಿ ಅವರು ಮಾತನಾಡಿ. ಕಳೆದ ವರ್ಷ ಧಾರವಾಡ ಶಹರ ವಲಯವು ಶೇ. 65 ರಷ್ಟು ಫಲಿತಾಂಶ ಸಾಧಿಸಿ ಜಿಲ್ಲೆಯಲ್ಲಿ 6ನೇ ಸ್ಥಾನದಲ್ಲಿತ್ತು. ಈ ಬಾರಿ ಶೇ. 97 ರಷ್ಟು ಫಲಿತಾಂಶ ಸಾಧನೆ ಮಾಡಿ ಐತಿಹಾಸಿಕ ದಾಖಲೆಯ ಮೂಲಕ ಜಿಲ್ಲೆಯಲ್ಲಿ 4ನೇ ಸ್ಥಾನ ಪಡೆದಿದೆ. 74 ಪ್ರೌಢ ಶಾಲೆಗಳಲ್ಲಿ 36 ಪ್ರೌಢ ಶಾಲೆಗಳು ಶೇ. 100 ರಷ್ಟು ಫಲಿತಾಂಶ ಸಾಧಿಸಿದ್ದು ಶ್ಲಾಘನೀಯ. ಈ ಸಾಧನೆಗೆ ಕಾರಣಿಭೂತರಾದ ಸರ್ವ ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ವಿಶೇಷ ಅಭಿನಂದನೆಗೆ ಅರ್ಹರೆಂದು ತಿಳಿಸಿದರು.
ಉತ್ತಮ ಸಾಧನೆಗೈದ ವಿದ್ಯಾರ್ಥಿಗಳಾದ ಕು. ಪ್ರತೀಕ ಸರದಾರ (622) ಮಲ್ಲಸಜ್ಜನ ಪ್ರೌಢಶಾಲೆ, ಶಮಂತಿಕಾ ಅಗಡಿ (618) ಪ್ರಜಂಟೇಶನ್ ಪ್ರೌಢಶಾಲೆ, ಮಾನಸ ಕೋಲ್ಹಾರ(617) ಕೆ.ಇ ಬೋರ್ಡ್ ಆಂಗ್ಲ ಮಾಧ್ಯಮ ಪ್ರೌಢಶಾಲೆ, ಅವನಿ (617) ಹಾಗೂ ಶ್ರೀನಿಧಿ ಹಿರೇಮಠ (617) ಜೆ.ಎಸ್.ಎಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆ ವಿದ್ಯಾಗಿರಿ, ಧಾರವಾಡ ವಿದ್ಯಾರ್ಥಿಗಳನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳು ಸನ್ಮಾನಿಸಿ ಅಭಿನಂದಿಸಿದರು.
ಕರ್ನಾಟಕ ಪ್ರೌಢಶಾಲಾ ಸಹ ಶಿಕ್ಷಕರ ಸಂಘ ಹಾಗೂ ಅನುದಾನಿತ ಪ್ರೌಢಶಾಲಾ ಸಹ ಶಿಕ್ಷಕರ ಸಂಘದಿಂದ ಕ್ಷೇತ್ರಶಿಕ್ಷಣಾಧಿಕಾರಿ, ಕ್ಷೇತ್ರ ಸಮನ್ವಾಯಧಿಕಾರಿ ಪ್ರವೀಣಕುಮಾರ ಗುಜ್ಜರ ಹಾಗೂ ತಾಲೂಕಾ ಎಸ್.ಎಸ್.ಎಲ್.ಸಿ ನೋಡಲ್ ಬಸವರಾಜ ಚಿಕ್ಕೂರ ಅವರನ್ನು ಸನ್ಮಾನಿಸಿ, ಗೌರವಿಸಲಾಯಿತು. ಸಮಾರಂಭದಲ್ಲಿ ಶಿಕ್ಷಕ ಸಂಘದ ಪ್ರತಿನಿಧಿಗಳಾದ ಎಮ್.ಜಿ.ಕೊಡ್ಲಿ, ಶಿವಾನಂದ ಖವಟಕೊಪ್ಪ, ಸಂಗಮೇಶ ಹಡಪದ, ಲಿಂಗರಾಜ ಅರ್ಕಸಾಲಿ, ಜಿ.ಎ.ಪೀರಣ್ಣವರ ಅವರು ಉಪಸ್ಥಿತರಿದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 