ತಲೆ ಮೇಲೆ ಕಲ್ಲು ಎತ್ತಿ ಹಾಕಿ ನಡುರಸ್ತೆಯಲ್ಲಿ ವ್ಯಕ್ತಿಯ ಭೀಕರ ಹತ್ಯೆ

 ಬೆಳಗಾವಿ : ವ್ಯಕ್ತಿಯೋರ್ವನ ತಲೆ ಮೇಲೆ ಕಲ್ಲು ಎತ್ತಿ ಹಾಕಿ ನಡುರಸ್ತೆಯಲ್ಲಿ ಭರ್ಬರವಾಗಿ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಕ್ಸಂಬಾದಲ್ಲಿ ಸೋಮವಾರ  ನಸುಕಿನ 3 ಗಂಟೆ ಸುಮಾರಿಗೆ ನಡೆದಿದೆ. 

    ಮಹೇಶ ಕುರ್ಣಿ(48) ಕೊಲೆಯಾದ ವ್ಯಕ್ತಿಯಾಗಿದ್ದು. ಯಕ್ಸಂಬಾ ಬಿರೇಶ್ವರ ಕಾಲೋನಿ ಬಳಿ ಈ ಕೊಲೆ ನಡೆದಿದೆ. ಕೊಲೆಗೆ ಕಾರಣ ತಿಳಿದು ಬಂದಿಲ್ಲ. ಸದಲಗಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.