ಹೊಸಪೇಟೆ: ಅನಧಿಕೃತ ಮಸೀದಿ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ಮನವಿ
ಹೊಸಪೇಟೆ 18: ತಾಲೂಕಿನ ಹಳೇ ಮಲಪನಗುಡಿ ಗ್ರಾಮದ ತಾಯಮ್ಮನ ಗುಡಿ ಹತ್ತಿರ ಅನಧಿಕೃತವಾಗಿ ಮಸೀದಿ ನಿರ್ಮಿಸಲಾಗುತ್ತಿದೆ ಎಂದು ಆರೋಪಿಸಿ ತಾಲೂಕು ಹಿಂದು ಜಾಗರಣ ವೇದಿಕೆ ಮತ್ತು ಮಲಪನಗುಡಿ ನಾಗರಿಕ ಬಳಗ ಸ್ಥಳೀಯ ತಾಲೂಕು ಕಚೇರಿಯ ಗ್ರೇಡ್ 2 ತಹಸೀಲ್ದಾರ್ ಅಮರನಾಥ್ ಗೆ ಮನವಿ ಸಲ್ಲಿಸಿತು.
ಗ್ರಾಮದಲ್ಲಿ ಕೇವಲ ಬೆರಳೆಣಿಕೆ ಮುಸ್ಲಿಂ ಮನೆಗಳಿರುವ ಸ್ಥಳದಲ್ಲಿ ನಿಯಮಬಾಹಿರವಾಗಿ ಮಸೀದಿ ನಿಮರ್ಿಸಲಾಗುತ್ತಿದೆ. ಕಾಮಗಾರಿ ಆರಂಭದಲ್ಲಿ ಕೇಳಿದಾಗ ಶಾಲೆ ನಿರ್ಮಿಸಲಾಗುತ್ತಿದೆ ಎಂದಿದ್ದರು. ಈಗ ಮಸೀದಿ ನಿರ್ಮಿಸಲಾಗುತ್ತಿದೆ. ಸಮೀಪದ ಕೊಂಡನಾಯಕನಹಳ್ಳಿ, ಹೊಸ ಮಲಪನಗುಡಿಗಳಲ್ಲಿ ದೊಡ್ಡ ಮಸೀದಿಗಳಿದ್ದರೂ ಇಲ್ಲಿ ಮಸೀದಿ ನಿರ್ಮಿಸುತ್ತಿರುವುದು ಸ್ಥಳೀಯರಿಗೆ ತೊಂದರೆಯಾಗಲಿದೆ. ನಮಾಜ್ ವೇಳೆ ಅತಿಹೆಚ್ಚು ಶಬ್ಧ ಮಾಡುವುದರಿಂದ ಮಕ್ಕಳು, ಗರ್ಭಿಣಿಯರಿಗೆ ಸಮಸ್ಯೆಯಾಗಲಿದೆ. ಅಲ್ಲದೆ ಶೇ.80 ಅಧಿಕ ಹಿಂದು ಜನರು ವಾಸಿಸುವ ಸ್ಥಳದಲ್ಲಿ ಮಸೀದಿ ಕಟ್ಟುವಂತಿಲ್ಲ ಎಂಬ ಸುಪ್ರೀಂಕೋರ್ಟ್ ಆದೇಶ ಉಲ್ಲಂಘಿಸಲಾಗಿದೆ. ಆದ್ದರಿಂದ ಕೂಡಲೇ ಕಾಮಗಾರಿ ಸ್ಥಗಿತಗೊಳಿಸಿ ಕಟ್ಟಡ ತೆರವುಗೊಳಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
ಸಂಘಟನೆಗಳ ಮುಖಂಡರಾದ ಗಣೇಶ್ ನೀರ್ಲಿಗಿ, ಮೌನೇಶ್ ಬಡಿಗೇರ್, ಬಿ.ನವೀನ್ ಕುಮಾರ್, ಹಳೇ ಮಲಪನಗುಡಿ ಗ್ರಾಪಂ ಸದಸ್ಯ ಬಿ.ತಾಯಪ್ಪ, ಗ್ರಾಮದ ಮುಖಂಡರಾದ ಕುರಟ್ಟಿ ವಾಸಪ್ಪ, ಕೆ.ಭರ್ಮಪ್ಪ, ಬಿ.ರಮೇಶ್, ಕುರಟ್ಟಿ ಬೀರಪ್ಪ, ಮಠದ ಈಶ್ವರಯ್ಯ, ತಾಪಂ ಮಾಜಿ ಸದಸ್ಯ ಬಿ.ಶಂಕ್ರಪ್ಪ ಇತರಿದ್ದರು.
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ 