ಹೊಸಪೇಟೆ: ಸುಭದ್ರ ಪ್ರಜಾಪ್ರಭುತ್ವಕ್ಕಾಗಿ ಯುವಜನತೆ ಹಕ್ಕು ಚಲಾಯಿಸಿ
ಲೋಕದರ್ಶನ ವರದಿ
ಹೊಸಪೇಟೆ 28: ಸುಭದ್ರ ಪ್ರಜಾಪ್ರಭುತ್ವಕ್ಕಾಗಿ ಯುವಜನತೆ ಮತದಾನದ ಹಕ್ಕು ಚಲಾಯಿಸುವುದರ ಜತೆಗೆ ಇತರರಿಗೂ ಅರಿವು ಮೂಡಿಸಬೇಕು ಎಂದು ಪ್ರಭಾರ ಸಹಾಯಕ ಆಯುಕ್ತ ಪಿ.ಎನ್.ಲೋಕೇಶ ಹೇಳಿದರು.
ಮತದಾರರ ಜಾಗೃತಿ ವೇದಿಕೆ ಮತ್ತು ಮತದಾರರ ಸಾಕ್ಷರತಾ ಕ್ಲಬ್ ಸಹಯೋಗದಲ್ಲಿ ತಾಲೂಕು ಆಡಳಿತ ನಗರದ ಥಿಯೋಸಾಫಿಕಲ್ ಮಹಿಳಾ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ ನಿಮಿತ್ತ ಶನಿವಾರ ಹಮ್ಮಿಕೊಂಡಿದ್ದ ಯುವ ಮತ್ತು ಭಾವಿ ಮತದಾರರ ಸಬಲೀಕರಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ದೇಶದಲ್ಲಿ ಮೊದಲ ಚುನಾವಣೆಯಿಂದಲೇ ಸ್ತ್ರೀ-ಪುರುಷರಿಗೆ ಮತದಾನದ ಹಕ್ಕು ನೀಡಲಾಗಿದೆ. ಶೇಕಡವಾರು ಮತದಾನ ಕುಸಿಯದಂತೆ ಎಚ್ಚರವಹಿಸಬೇಕು ಎಂದರು.
ಸಂಪನ್ಮೂಲ ವ್ಯಕ್ತಿ ಕೆ.ಬಸವರಾಜ, ಕಾಲೇಜ್ ಮಂಡಳಿ ಅಧ್ಯಕ್ಷ ಜಿ.ಭರಮನಲಿಂಗನ ಗೌಡ ಮಾತನಾಡಿದರು. ವಿದ್ಯಾಥರ್ಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ತಹಸೀಲ್ದಾರ್ ಎಚ್.ವಿಶ್ವನಾಥ, ಆಡಳಿತ ಮಂಡಳಿ ಸದಸ್ಯ ವಿ.ಶರಣಪ್ಪ, ಪ್ರಾಚಾಯರ್ೆ ಮಂಜುಳಾ, ಡಾ.ಚನ್ನಪ್ಪ, ಎ.ಕಾವೇರಿ ಇತರರಿದ್ದರು.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 