ಹೊಸಪೇಟೆ: ಆಂಗ್ಲ ಭಾಷೆ ವಿಶೇಷ ತರಬೇತಿಗೆ ಚಾಲನೆ
ಲೋಕದರ್ಶನ ವರದಿ
ಹೊಸಪೇಟೆ 03: ಪಪೂ ಶಿಕ್ಷಣ ಇಲಾಖೆ ಕೈಗೊಂಡಿರುವ ವಿಶ್ವಾಸ ಕಿರಣ ತರಬೇತಿ ಕಾರ್ಯಾಗಾರ ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೆ ಅನುಕೂಲವಾಗಿದೆ ಎಂದು ಬಾಲಕಿಯರ ಸರ್ಕಾರಿ ಪಿಯು ಕಾಲೇಜು ಪ್ರಾಚಾರ್ಯ ಜೆ.ಸಿದ್ರಾಮ ಹೇಳಿದರು.
ನಗರದ ಕಾಲೇಜಿನಲ್ಲಿ ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗೆ ಭಾನುವಾರ ಹಮ್ಮಿಕೊಂಡಿದ್ದ ವಿಶ್ವಾಸ ಕಿರಣ ಆಂಗ್ಲ ಭಾಷೆ ವಿಶೇಷ ತರಬೇತಿ ಕಾರ್ಯಾಗಾರದಲ್ಲಿ ಮಾತನಾಡಿದರು. ಸರ್ಕಾರಿ ಶಾಲಾ, ಕಾಲೇಜುಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಇಂಗ್ಲಿಷ್ ವಿಷಯ ಕಠಿಣವಾಗಿದೆ. ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ 50 ಅಂಕಗಳ ವ್ಯಾಕರಣ ಇರುವುದರಿಂದ ತರಬೇತಿಯ ಪ್ರಯೋಜನ ಪಡೆಯಬೇಕು ಎಂದು ಸಲಹೆ ನೀಡಿದರು.
ಕಾರ್ಯಾಗಾರದ ಸಂಯೋಜಕ ಡಾ.ದಯಾನಂದ ಕಿನ್ನಾಳ್ ಮಾತನಾಡಿ, ರಾಜ್ಯದಲ್ಲಿ 411 ತರಬೇತಿ ಕೇಂದ್ರಗಳನ್ನು ತೆರೆಯಲಾಗಿದೆ. ಇಂಗ್ಲಿಷ್ ಬಲ್ಲ ಸಂಪನ್ಮೂಲ ವ್ಯಕ್ತಿಗಳಿದ್ದು, ವಿದ್ಯಾರ್ಥಿಗಳು ಯಾವುದೇ ಗೊಂದಲ, ಅನುಮಾನಗಳಿದ್ದರೆ ನಿವಾರಿಸಿಕೊಳ್ಳಬೇಕು. ಡಿಸೆಂಬರ್ವರೆಗೆ ಪ್ರತಿ ಭಾನುವಾರ ಕಾರ್ಯಾಗಾರ ನಡೆಯಲಿದ್ದು, ವಿದ್ಯಾರ್ಥಿಗಳು ಭಾಗವಹಿಸಬೇಕು ಎಂದು ತಿಳಿಸಿದರು. ಸಂಪನ್ಮೂಲ ವ್ಯಕ್ತಿಗಳಾದ ವಿ.ಜಂಬುನಾಥ, ವೆಂಕಟೇಶಲು, ವೀರಭದ್ರಗೌಡ, ಬಿ.ಮಂಜುನಾಥ, ಗೋವಿಂದ ಇತರರಿದ್ದರು. 431 ವಿದ್ಯಾಥರ್ಿಗಳು ತರಬೇತಿಯಲ್ಲಿ ಭಾಗವಹಿಸಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 