ಹೊಸಪೇಟೆ: ವಿಜಯನಗರ ವೈಭವ ಸಾರುವ ಹಂಪಿ ಉತ್ಸವದ ಸಿದ್ಧತೆ
ಲೋಕದರ್ಶನ ವರದಿ
ಹೊಸಪೇಟೆ 05: ಮುಂಬರುವ ಜ.11 ಮತ್ತು 12ರಂದು ಹಮ್ಮಿಕೊಳ್ಳಲಾಗಿರುವ ವಿಜಯನಗರ ಸಾಮ್ರಾಜ್ಯದ ವೈಭವ ಸಾರುವ ಹಂಪಿ ಉತ್ಸವದ ಸಿದ್ಧತೆಗಳನ್ನು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಮಂಗಳವಾರ ಪರಿಶೀಲಿಸಿದರು.
ಮುಖ್ಯ ವೇದಿಕೆ ನಿರ್ಮಿಸಲಾಗುವ ಎದುರು ಬಸವಣ್ಣ ಹತ್ತಿರದ ಸ್ಥಳ, ಮಾಧ್ಯಮ ಗ್ಯಾಲರಿ, ಗ್ರೀನ್ ರೂಮ್, ಮಳಿಗೆಗಳ ಸ್ಥಳಗಳನ್ನು ಪರಿಶೀಲಿಸಿದರು. ಕಳೆದ ಉತ್ಸವದ ಸಂದರ್ಭದಲ್ಲಿ ಕೈಗೊಂಡ ಸಿದ್ಧತೆಗಳ ಮಾದರಿಯಲ್ಲಿಯೇ ಈ ಬಾರಿಯೂ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಡಿಸಿ ನಕುಲ್ ಸೂಚಿಸಿದರು.
ನಂತರ ವಿರೂಪಾಕ್ಷೇಶ್ವರ ದೇವಸ್ಥಾನದ ಆವರಣದಲ್ಲಿ ನಿಮರ್ಿಸಲಾಗುವ ವೇದಿಕೆ ಸ್ಥಳ, ಮೆಹಂದಿ ಮತ್ತು ರಂಗೋಲಿ ಸ್ಪಧರ್ೆಗಳ ಸ್ಥಳಗಳನ್ನು ಪರಿಶೀಲಿಸಿದರು. ಸ್ವಚ್ಛತೆ ಹಾಗೂ ಇತರ ಕ್ರಮಗಳನ್ನು ಕೂಡಲೇ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿದರ್ೆಶನ ನೀಡಿದರು.
ಕಡಲೇಕಾಳು ಗಣೇಶ ಹಾಗೂ ಸಾಸಿವೆ ಕಾಳು ಗಣೇಶ ಬಳಿ ನಿಮರ್ಿಸಲಾಗುವ ವೇದಿಕೆ ಸ್ಥಳ ಪರಿಶೀಲಿಸಿದರು ಮತ್ತು ಅಧಿಕಾರಿಗಳಿಂದ ಮಾಹಿತಿ ಪಡೆದರು.
ಎರಡು ದಿನಗಳ ಕಾಲ ನಡೆಯಲಿರುವ ಈ ಉತ್ಸವದಲ್ಲಿ ನಾಲ್ಕು ವೇದಿಕೆಗಳನ್ನು ನಿಮರ್ಿಸಲು ಉದ್ದೇಶಿಸಲಾಗಿದೆ.
ಜಿಪಂ ಸಿಇಒ ಕೆ.ನಿತೀಶ್, ಹೊಸಪೇಟೆ ಸಹಾಯಕ ಆಯುಕ್ತ ಶೇಖ್ ತನ್ವೀರ್, ಪ್ರೊಬೆಷನರಿ ಐಎಎಸ್ ಅಧಿಕಾರಿ ಈಶ್ವರ್ ಕಾಂಡೂ, ಅಪರ ಜಿಲ್ಲಾಧಿಕಾರಿ ಮಂಜುನಾಥ, ಸಹಾಯಕ ಆಯುಕ್ತ ರಮೇಶ ಕೋನರೆಡ್ಡಿ, ಡಿಯುಡಿಸಿ ಯೋಜನಾ ನಿದರ್ೆಶಕ ರಮೇಶ, ಹಂಪಿ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಪಿ.ಎನ್.ಲೋಕೇಶ, ಎಎಸ್ ಐ ಅಧಿಕಾರಿ ಕಾಳಿಮುತ್ತು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಪ್ರಭಾರ ಸಹಾಯಕ ನಿದರ್ೆಶಕ ರಾಜಪ್ಪ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿದರ್ೆಶಕ ಬಿ.ಕೆ.ರಾಮಲಿಂಗಪ್ಪ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 