ಹೊಸಪೇಟೆ: ಸಚಿವ ಸಿ.ಟಿ.ರವಿ ಪ್ರವಾಸಿ ತಾಣಗಳಿಗೆ ಭೇಟಿ
ಲೋಕದರ್ಶನ ವರದಿ
ಹೊಸಪೇಟೆ 05: ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕ್ರತಿ ಹಾಗೂ ಸಕ್ಕರೆ ಖಾತೆ ಸಚಿವ ಸಿ.ಟಿ.ರವಿ ಅವರು ಹಂಪಿಯ ವಿವಿಧ ಪ್ರವಾಸಿ ತಾಣಗಳಿಗೆ ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಹಂಪಿಯ ವಿರೂಪಾಕ್ಷೇಶ್ವರ ದೇವಸ್ಥಾನಕ್ಕೆ ಮೊದಲಿಗೆ ಆಗಮಿಸಿ ವಿರೂಪಾಕ್ಷೇಶ್ವರರ ದರ್ಶನ ಪಡೆದರು. ಲಕ್ಷ್ಮೀ ಆನೆಯು ಸಚಿವರಿಗೆ ಹೂಮಾಲೆ ಹಾಕುವುದರ ಮೂಲಕ ಸ್ವಾಗತಿಸಿತು.
ವಿದ್ಯಾರಣ್ಯ ಪೀಠದ ಶ್ರೀಗಳ ಆಶೀವರ್ಾದ ಪಡೆದರು. ನಂತರ ಅವರು ವಿರೂಪಾಕ್ಷೇಶ್ವರ ದೇವಸ್ಥಾನ ಹಾಗೂ ಎದುರುಬಸವಣ್ಣ ಮಂಟಪದ ಸುತ್ತಮುತ್ತಲಿನ ಮಂಟಪಗಳ, ಸಾಲುಕಂಬಗಳ ಸ್ಥಿತಿ ಪರಿಶೀಲಿಸಿದರು. ನಂತರ ಮಾತನಾಡಿದ ಅವರು ಹಂಪಿ ಉತ್ಸವಕ್ಕೆ ನಿರ್ದಿಷ್ಟ ದಿನಾಂಕ ನಿಗದಿಪಡಿಸಲಾಗುವುದು ಮತ್ತು ಬಹಳ ದೊಡ್ಡ ಅಸಹಜ ಘಟನೆ ಆದಂತಹ ಸಂದರ್ಭದಲ್ಲಿ ಸರಳವಾಗಿ ಆಚರಿಸಲಾಗುವುದು. ಮಂಟಪಗಳು, ಸ್ಮಾರಕಗಳು ಉಳಿಯಲೇಬೇಕು,ಯಾವುದೇ ಬೆಲೆ ತೆತ್ತಾದರೂ ಸರಿ ಎಂದರು. ಅಧ್ಯಯನ ಕಾರಣದಿಂದ ಪ್ರವಾಸಿ ತಾಣಗಳಿಗೆ ಭೇಟಿ ನೀಡಿರುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಶಾಸಕ ಸೋಮಲಿಂಗಪ್ಪ, ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಸೇರಿದಂತೆ ಇತರರು ಇದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 