ಹೊಸಪೇಟೆ: ಸಚಿವ ಸಿ.ಟಿ.ರವಿ ಪ್ರವಾಸಿ ತಾಣಗಳಿಗೆ ಭೇಟಿ
ಲೋಕದರ್ಶನ ವರದಿ
ಹೊಸಪೇಟೆ 05: ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕ್ರತಿ ಹಾಗೂ ಸಕ್ಕರೆ ಖಾತೆ ಸಚಿವ ಸಿ.ಟಿ.ರವಿ ಅವರು ಹಂಪಿಯ ವಿವಿಧ ಪ್ರವಾಸಿ ತಾಣಗಳಿಗೆ ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಹಂಪಿಯ ವಿರೂಪಾಕ್ಷೇಶ್ವರ ದೇವಸ್ಥಾನಕ್ಕೆ ಮೊದಲಿಗೆ ಆಗಮಿಸಿ ವಿರೂಪಾಕ್ಷೇಶ್ವರರ ದರ್ಶನ ಪಡೆದರು. ಲಕ್ಷ್ಮೀ ಆನೆಯು ಸಚಿವರಿಗೆ ಹೂಮಾಲೆ ಹಾಕುವುದರ ಮೂಲಕ ಸ್ವಾಗತಿಸಿತು.
ವಿದ್ಯಾರಣ್ಯ ಪೀಠದ ಶ್ರೀಗಳ ಆಶೀವರ್ಾದ ಪಡೆದರು. ನಂತರ ಅವರು ವಿರೂಪಾಕ್ಷೇಶ್ವರ ದೇವಸ್ಥಾನ ಹಾಗೂ ಎದುರುಬಸವಣ್ಣ ಮಂಟಪದ ಸುತ್ತಮುತ್ತಲಿನ ಮಂಟಪಗಳ, ಸಾಲುಕಂಬಗಳ ಸ್ಥಿತಿ ಪರಿಶೀಲಿಸಿದರು. ನಂತರ ಮಾತನಾಡಿದ ಅವರು ಹಂಪಿ ಉತ್ಸವಕ್ಕೆ ನಿರ್ದಿಷ್ಟ ದಿನಾಂಕ ನಿಗದಿಪಡಿಸಲಾಗುವುದು ಮತ್ತು ಬಹಳ ದೊಡ್ಡ ಅಸಹಜ ಘಟನೆ ಆದಂತಹ ಸಂದರ್ಭದಲ್ಲಿ ಸರಳವಾಗಿ ಆಚರಿಸಲಾಗುವುದು. ಮಂಟಪಗಳು, ಸ್ಮಾರಕಗಳು ಉಳಿಯಲೇಬೇಕು,ಯಾವುದೇ ಬೆಲೆ ತೆತ್ತಾದರೂ ಸರಿ ಎಂದರು. ಅಧ್ಯಯನ ಕಾರಣದಿಂದ ಪ್ರವಾಸಿ ತಾಣಗಳಿಗೆ ಭೇಟಿ ನೀಡಿರುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಶಾಸಕ ಸೋಮಲಿಂಗಪ್ಪ, ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಸೇರಿದಂತೆ ಇತರರು ಇದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 