ಹೊಸಪೇಟೆ: ನಿತ್ಯ ದಾಸೋಹಕ್ಕೆ ಪರವಾನಿಗೆ ಕಡ್ಡಾಯ
ಲೋಕದರ್ಶನ ವರದಿ
ಹೊಸಪೇಟೆ 28: ದೇವಸ್ಥಾನ, ಮಸೀದಿ, ಚರ್ಚ ಹಾಗೂ ಗುರುದ್ವಾರಗಳಲ್ಲಿ ನಡೆಸುವ ದಾಸೋಹಕ್ಕೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ಪರವಾನಗಿ ಕಡ್ಡಾಯ ಎಂದು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ಆಯುಕ್ತೆ ಮಂಜುಶ್ರೀ ತಿಳಿಸಿದರು.
ನಗರದ ಶ್ರೀಕೊಟ್ಟೂರುಸ್ವಾಮಿ ಮಠದಲ್ಲಿ ಬೆಂಗಳೂರು ಆಯುಕ್ತಾಲಯ ಹಾಗೂ ಬಳ್ಳಾರಿ ಆಹಾರ ಸುರಕ್ಷಣೆ ಮತ್ತು ಗುಣಮಟ್ಟ ಪ್ರಾಧಿಕಾರದಿಂದ ಬುಧವಾರ ಹಮ್ಮಿಕೊಂಡಿದ್ದ ನಿತ್ಯ ದಾಸೋಹ ದೇವಸ್ಥಾನಗಳ ಅಧಿಕಾರಿಗಳಿಗೆ ಆಹಾರ ಸುರಕ್ಷಣೆ ಮತ್ತು ಗುಣಮಟ್ಟ ತರಬೇತಿ ಕಾರ್ಯಾಗಾರದಲ್ಲಿ ಮಾತನಾಡಿದರು.
ಆಹಾರ ತಯಾರಿಕೆ ನೈರ್ಮಲ್ಯದಿಂದ ಕೂಡಿರಬೇಕು. ಪ್ರಸಾದ ತಯಾರಕರು ಮತ್ತು ದೇವಸ್ಥಾನದ ಟ್ರಸ್ಟಿಗಳು ಗುಣಮಟ್ಟಕ್ಕೆ ಆದ್ಯತೆ ನೀಡಬೇಕು. ಪ್ರಾಧಿಕಾರದಿಂದ ಪರವನಾಗಿ ಪಡೆದು ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಸಲಹೆ ನೀಡಿದರು.
ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ ಉಪ ಆಯುಕ್ತೆ ಡಾ.ಲತಾ ಪ್ರಮೀಳಾ ಮಾತನಾಡಿ, ಗುಣಮಟ್ಟದ ಆಹಾರ ತಯಾರಿಸುವ ಧಾಮರ್ಿಕ ಕೇಂದ್ರಗಳಿಗೆ ಪ್ರಾಧಿಕಾರದಿಂದ ಭೋಗ್ ಪ್ರಮಾಣಪತ್ರ ನೀಡಲಾಗುವುದು. ಇದು ಅಲ್ಲಿಯ ಸ್ವಚ್ಛತೆ ಮತ್ತು ಗುಣಮಟ್ಟ ಪ್ರಮಾಣೀಕರಿಸಲಿದೆ. ಎಲ್ಲಿ ಭೋಗ್ ಪ್ರಮಾಣಪತ್ರ ಇರುತ್ತದೆಯೋ ಅಲ್ಲಿ ಶುದ್ಧ ಮತ್ತು ಆರೋಗ್ಯಕರ ಪ್ರಸಾದವಿರುತ್ತದೆ ಎಂಬ ಭಾವನೆ ಜನರಲ್ಲಿ ಬರಲಿದೆ. ಸ್ವಚ್ಛತೆಗೆ ಆದ್ಯತೆ ನೀಡದಿದ್ದಲ್ಲಿ ಸಕರ್ಾರದ ನಿಯಾಮಾನುಸಾರ ಕ್ರಮವಹಿಸಲಾಗುವುದು.
ಬಳ್ಳಾರಿ, ಕೊಪ್ಪಳ, ಗದಗ, ಕಲಬುರಗಿ ಜಿಲ್ಲೆಗಳಿಂದ ಆಗಮಿಸಿದ್ದ ಅಧಿಕಾರಿಗಳು ಹಾಗೂ ದೇವಸ್ಥಾನದ ಟ್ರಸ್ಟ್ ಪದಾಧಿಕಾರಿಗಳಿಗೆ, ಪವರ್ ಪ್ರಸೆಂಟೇಷನ್ ಮೂಲಕ ಅಡುಗೆ ಮನೆಯ ಸ್ವಚ್ಛತೆ ಮತ್ತು ಆಹಾರ ತಯಾರಿಕೆ ಕುರಿತು ಮಾರ್ಗದರ್ಶನ ನೀಡಲಾಯಿತು. ಪ್ರಾಧಿಕಾರದ ಜಿಲ್ಲಾ ಅಂಕಿತಾಧಿಕಾರಿ ಡಾ.ಮರಿಯಂಬಿ, ತಾಲೂಕು ಆರೋಗ್ಯಾಧಿಕಾರಿಗಳು, ದೇವಸ್ಥಾನ ನಿರ್ವಹಣೆಯ ಅಧಿಕಾರಿಗಳು ಇದ್ದರು.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 