ಹೊಸಪೇಟೆ: ಹಿಂದೂಪರ ಸಂಘಟನೆಯಿಂದ ಪ್ರತಿಭಟನೆ
ಲೋಕದರ್ಶನ ವರದಿ
ಹೊಸಪೇಟೆ 22: ಬೆಂಗಳೂರಿನ ಫ್ರೇಡಂ ಪಾರ್ಕ್ಲ್ಲಿ ಸಿಎಎ ಕಾಯ್ದೆ ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ ಯುವತಿ ಅಮೂಲ್ಯ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ನಗರದಲ್ಲಿ ಶುಕ್ರವಾರ ಹಿಂದೂಪರ ಸಂಘಟನೆ ಕಾರ್ಯಕರ್ತರು ಪ್ರತಿಕೃತಿದಹಿಸಿ ಪ್ರತಿಭಟನೆ ನಡೆಸಿದರು.
ನಗರದ ನಾನಾ ರಸ್ತೆಗಳಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾರ್ಯಕರ್ತರು ಯುವತಿ ಮೇಲೆ ಕಠಿಣ ಕ್ರಮಕ್ಕೆ ಒತ್ತಾಯಿಸಿದರು.
ನಂತರ ಸ್ಥಳೀಯ ಶಾನಭಾಗ ವೃತ್ತದಲ್ಲಿ ಜಮಾಯಿಸಿ ಕೆಲ ಕಾಲ ಧರಣಿ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ದೇಶದ ನೆಲ, ಜಲ, ಅನ್ನವನ್ನುಂಡು ದೇಶ ದ್ರೋಹ ಕೃತ್ಯಗಳಿಗೆ ಕೈಹಾಕುತ್ತಿರುವುದು ಅಪರಾಧವಾಗಿದೆ. ಶತ್ರು ರಾಷ್ಟ್ರದ ಪರ ಜಿಂದಾಬಾದ್ ಎನ್ನುವವರು ದೇಶದ್ರೋಹಿಗಳು, ಇಂತವರ ವಿರುದ್ಧ ಹಾಗೂ ಇಂತಹ ದುಷ್ಯಕೃತ್ಯಗಳಿಗೆ ಕುಮ್ಮಕ್ಕು ನೀಡುವವರ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 