ಹೊಸಪೇಟೆ: ವಾಲಿಬಾಲ್ ಟೂರ್ನಮೆಂಟ್ ನಲ್ಲಿ ಪಿಡಿಐಟಿಗೆ ದ್ವಿತೀಯ ಸ್ಥಾನ
ಲೋಕದರ್ಶನ ವರದಿ
ಹೊಸಪೇಟೆ 12: ಕಲಬುರಗಿಯ ಶೆಟ್ಟಿ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಆಯೋಜಿಸಲಾಗಿದ್ದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕಲಬುರಗಿ ವಲಯ ಮಟ್ಟದ ಇಂಜಿನಿಯರಿಂಗ್ ಕಾಲೇಜುಗಳ ವಾಲಿಬಾಲ್ ಟೂರ್ನಮೆಂಟ್ ನಲ್ಲಿ ಹೊಸಪೇಟೆಯ ಪ್ರೌಢದೇವರಾಯ ಮಹಾವಿದ್ಯಾಲಯದ ವಾಲಿಬಾಲ್ ತಂಡವು ರನ್ನಸರ್್ ಅಪ್ (ದ್ವಿತೀಯ ಸ್ಥಾನ) ಪಡೆಯಿತು. ಪಿಡಿಐಟಿಯ ಆಡಳಿತ ಮಂಡಳಿ ಅಧ್ಯಕ್ಷ ಜಾನೆಕುಂಟೆ ಬಸವರಾಜ್, ಪ್ರಾಂಶುಪಾಲ ಡಾ ಎಸ್ ಎಂ ಶಶಿಧರ್, ದೈಹಿಕನಿರ್ದೇಶಕ ಕೆ ಎಸ್ ಮಂಜುನಾಥ್ ವಿದ್ಯಾರ್ಥಿಗಳನ್ನು ಅಭಿನಂದಿಸಿದರು.
ಟೂರ್ನಮೆಂಟ್ ನಲ್ಲಿ ವಿಜಯಪುರದ ಸಿಕ್ಯಾಬ್ ಇಂಜಿನಿಯರಿಂಗ್ ಕಾಲೇಜು ಪ್ರಥಮ ಸ್ಥಾನ ಪಡೆಯಿತು ಬೀದರ್ ನ ಜಿ ಎನ್ ಡಿ ಇಂಜಿನಿಯರಿಂಗ್ ಕಾಲೇಜು ಹಾಗೂ ಬಳ್ಳಾರಿಯ ರಾವ್ ಬಹದ್ದೂರ್ ವೈ ಮಹಾಬಲೇಶ್ವರಪ್ಪ ಇಂಜಿನಿಯರಿಂಗ್ ಕಾಲೇಜುಗಳು ಕ್ರಮವಾಗಿ ತೃತೀಯ ಮತ್ತು ನಾಲ್ಕನೇ ಸ್ಥಾನ ಗಳಿಸಿದವು.
ವಾಲಿಬಾಲ್ ತಂಡದವಿದ್ಯಾರ್ಥಿಳೊಂದಿಗೆ ಪಿಡಿಐಟಿಯ ಆಡಳಿತ ಮಂಡಳಿ ಅಧ್ಯಕ್ಷ ಜಾನೆಕುಂಟೆ ಬಸವರಾಜ್, ಪ್ರಾಂಶುಪಾಲ ಡಾ ಎಸ್ ಎಂ ಶಶಿಧರ್, ದೈಹಿಕ ನಿದರ್ೇಶಕ ಕೆ ಎಸ್ ಮಂಜುನಾಥ್.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 