ಆಸ್ಪತ್ರೆ ಸೋಂಕು ನಿಯಂತ್ರಣ ಅಗತ್ಯ: ಡಾ.ಪೂರ್ಣಿಮ
Hospital infection control is essential: Dr. Poornima
ಕಾರವಾರ 12 :- ಆರೋಗ್ಯ ಸಂಸ್ಥೆಗಳಲ್ಲಿ ರೋಗಿಗಳ ಸುರಕ್ಷತೆಯನ್ನು ಹೆಚ್ಚಿಸುವ ಉದ್ದೇಶದಿಂದ ಸೋಂಕು ತಡೆ ಮತ್ತು ನಿಯಂತ್ರಣ ಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸುವುದು ಅಗತ್ಯ ಎಂದು ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಡೀನ್ ಹಾಗೂ ನಿರ್ದೇಶಕಿ ಡಾ. ಪೂರ್ಣಿಮಾ ಆರ್.ಟಿ ಹೇಳಿದರು.
ಅವರು ಶುಕ್ರವಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಗುಣಮಟ್ಟ ಭರವಸೆ ಘಟಕ (ಆಕಿಂಗ) ಹಾಗೂ ಮಿಣಿ ಜೀವಶಾಸ್ತ್ರ ವಿಭಾಗ, ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಜಿಲ್ಲಾಮಟ್ಟದ ಆಸ್ಪತ್ರೆ ಸೋಂಕು ನಿಯಂತ್ರಣ ಸಮಿತಿ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಸೋಂಕು ನಿಯಂತ್ರಣ ಕ್ರಮಗಳನ್ನು ಮತ್ತಷ್ಟು ಬಲಪಡಿಸಿ, ಆಸ್ಪತ್ರೆ ಸಂಬಂದಿತ ಸೋಂಕುಗಳನ್ನು ಕಡಿಮೆ ಮಾಡಲು ಆರೋಗ್ಯ ಸೇವೆಗಳ ಗುಣಮಟ್ಟವನ್ನು ಹೆಚ್ಚಿಸಲು ಹಾಗೂ ರೋಗಿಗಳ ಸುರಕ್ಷತೆಯನ್ನು ಖಚಿತಪಡಿಸಲು ಇಂತಹ ಕಾರ್ಯಾಗಾರಗಳು ಅತ್ಯಂತ ಅಗತ್ಯವಾಗಿದ್ದು, ಆರೋಗ್ಯ ಸಿಬ್ಬಂದಿ ಹಾಗೂ ರೋಗಿಗಳ ಸುರಕ್ಷತೆಯಲ್ಲಿ ಆಸ್ಪತ್ರೆ ಸೋಂಕು ನಿಯಂತ್ರಣ ಸಮಿತಿಯ ಪಾತ್ರ ಅತ್ಯಂತ ಮಹತ್ವಕರವಾಗಿದೆ ಎಂದರು.
ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಅಶ್ವಿನಿ ಬೋರ್ಕರ್ ಮಾತನಾಡಿ , ತರಬೇತಿಯಲ್ಲಿ ಪಡೆದ ಜ್ಞಾನ ಮತ್ತು ಕೌಶಲ್ಯಗಳು ಮುಂದಿನ ದಿನಗಳಲ್ಲಿ ಆಸ್ಪತ್ರೆ ಸಂಬಂಧಿತ ಸೋಂಕುಗಳನ್ನು ತಡೆಗಟ್ಟಲು, ಆರೋಗ್ಯ ಸೇವೆಗಳ ಗುಣಮಟ್ಟವನ್ನು ಹೆಚ್ಚಿಸಲು ಹಾಗೂ ರೋಗಿಗಳ ಸುರಕ್ಷತೆಯನ್ನು ಮತ್ತಷ್ಟು ಬಲಪಡಿಸಲು ಸಹಕಾರಿಯಾಗಲಿದೆ ಎಂದರು.
ತರಬೇತಿ ಕಾರ್ಯಾಗಾರದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಶಂಕರ ರಾವ್ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಅಧೀಕ್ಷಕ ಡಾ.ನರೇಶ್ ಪವಾಸ್ಕರ್ ಸಂಪನ್ಮೂಲ ವ್ಯಕ್ತಿಗಳಾಗಿ ಮಿಣಿ ಜೀವಿ ಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ವೆಂಕಟೇಶ್ ವಿ.ಎನ್, ಪ್ರಾಧ್ಯಾಪಕರುಗಳು ಜಿಲ್ಲೆಯ ತಾಲೂಕು ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿಗಳು ಭಾಗವಹಿಸಿದರು.
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ 