ಸೌದಿ ಅರೇಬಿಯಾ ಬಸ್ ದುರಂತದಲ್ಲಿ ಹುಬ್ಬಳ್ಳಿ ವ್ಯಕ್ತಿ ಸಾವು

ಸೌದಿ ಅರೇಬಿಯಾ ಬಸ್ ದುರಂತದಲ್ಲಿ ಹುಬ್ಬಳ್ಳಿ ವ್ಯಕ್ತಿ ಸಾವು  Hubballi man dies in Saudi Arabia bus accident

 ಧಾರವಾಡ ನ.18: ಸೌದಿ ಅರೇಬಿಯಾದ ಮುಫ್ರಿಹತ್ ಬಳಿ ಸೋಮವಾರ ಮುಂಜಾನೆ ಸಂಭವಿಸಿದ ಬಸ್ ದುರಂತದಲ್ಲಿ ಹುಬ್ಬಳ್ಳಿಯ ಗಣೇಶ ಪೇಟೆ ನಿವಾಸಿ ಅಬ್ದುಲ್ ಘಣಿ ಶಿರಹಟ್ಟಿ (55) ಮೃತಪಟ್ಟಿದ್ದು, ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಎಸ್‌.ಲಾಡ್ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.  ಮಕ್ಕಾದಿಂದ ಮದೀನಾಗೆ ತೆರಳುತ್ತಿದ್ದ ಉಮ್ರಾ ಯಾತ್ರಿಕರಿದ್ದ ಬಸ್ ಸೌದಿ ಅರೇಬಿಯಾದ ಮುಫ್ರಿಹತ್ ಬಳಿ ಸೋಮವಾರ ಮುಂಜಾನೆ ಡೀಸೆಲ್ ಟ್ಯಾಂಕರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 45 ಮಂದಿ ಭಾರತೀಯ ಯಾತ್ರಿಕರು ಮೃತಪಟ್ಟಿದ್ದರು.  ದುರಂತದಲ್ಲಿ ಮೃತಪಟ್ಟವರಲ್ಲಿ ಅಬ್ದುಲ್ ಘನಿ ಶಿರಹಟ್ಟಿ ಅವರು ಕೂಡ ಸೇರಿದ್ದಾರೆ ಎಂಬುದು ದುಃಖಕರ ವಿಷಯ. ಅವರ ಕುಟುಂಬಕ್ಕೆ ನನ್ನ ಸಂತಾಪಗಳು ಎಂದು ಸಚಿವರು ತಿಳಿಸಿದ್ದಾರೆ.