ಹುಬ್ಬಳ್ಳಿ-ಪುಣೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಘಟಪ್ರಭಾ ರೈಲ್ವೆ ನಿಲ್ದಾಣದಲ್ಲಿ ನಿಲುಗಡೆ
Hubli-Pune Vande Bharat Express halts at Ghataprabha Railway Station
ಹುಬ್ಬಳ್ಳಿ-ಪುಣೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಘಟಪ್ರಭಾ ರೈಲ್ವೆ ನಿಲ್ದಾಣದಲ್ಲಿ ನಿಲುಗಡೆ
ಬೆಳಗಾವಿ 17: ಹುಬ್ಬಳ್ಳಿ-ಪುಣೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಘಟಪ್ರಭಾ ರೈಲ್ವೆ ನಿಲ್ದಾಣದಲ್ಲಿ ನಿಲುಗಡೆ ಮಾಡಲು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ ಅವರು ಆದೇಶಿಸಿದ್ದಾರೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ತಿಳಿಸಿದ್ದಾರೆ.
ಇತ್ತಿಚಿಗೆ ನವದೆಹಲಿಯಲ್ಲಿ ಕೇಂದ್ರ ರೈಲ್ವೆ ಸಚಿವರನ್ನು ಭೇಟಿಯಾಗಿ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಬೆಳಗಾವಿಯನ್ನು ಹೊರತು ಪಡಿಸಿದರೆ ನೇರವಾಗಿ ಮಹಾರಾಷ್ಟ್ರದ ಮೀರಜ ಮತ್ತು ಸಾಂಗ್ಲಿ ನಿಲ್ದಾಣದಲ್ಲಿ ನಿಲುಗಡೆಗೆ ಅವಕಾಶ ನೀಡಲಾಗಿದೆ. ಜಿಲ್ಲೆಯ ಅತ್ಯಂತ ಮಧ್ಯವರ್ತಿ ಸ್ಥಳವಾಗಿರುವ ಘಟಪ್ರಭಾ ಹಲವಾರು ತಾಲೂಕುಗಳ ಕೇಂದ್ರ ಸ್ಥಾನವಾಗಿದ್ದು ಹಾಗೂ ಅಮೃತ ಭಾರತ ಯೋಜನೆಯಡಿ ನವೀಕರಣಗೊಂಡ ರೈಲು ನಿಲ್ದಾಣದಲ್ಲಿ ನಿಲುಗಡೆಗೆ ಅವಕಾಶ ನೀಡಬೇಕೆಂದು ಮನವಿ ಮಾಡಲಾಗಿತ್ತು. ನನ್ನ ಮನವಿಗೆ ಸ್ಪಂದಿಸಿ ಶೀಘ್ರವಾಗಿ ರೈಲು ನಿಲುಗಡೆ ಆದೇಶ ನೀಡಿದ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ, ರಾಜ್ಯ ರೈಲ್ವೆ ಸಚಿವ ವಿ. ಸೋಮಣ್ಣ ಹಾಗೂ ಸಹಕಾರ ನೀಡಿದ ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣೆ, ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಹ್ಲಾದ ಜೋಶಿ ಅವರುಗಳಿಗೆ ಈ ಭಾಗದ ಜನತೆಯ ಪರವಾಗಿ ಹೃತ್ಪೂರ್ವಕ ಧನ್ಯವಾದಗಳನ್ನು ತಿಳಿಸಿದ್ದಾರೆ. ಶೀಘ್ರದಲ್ಲಿ ರೈಲು ನಿಲುಗಡೆಗೆ ದಿನಾಂಕ ತಿಳಿಸಲಾಗುವುದು ಎಂದು ಸಂಸದ ಈರಣ್ಣ ಕಡಾಡಿ ಹೇಳಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 