ಕಟ್ಟಡ ನಿರ್ಮಾಣಕ್ಕೆ ಗುದ್ದಲಿ ಪೂಜೆ

ಕಟ್ಟಡ ನಿರ್ಮಾಣಕ್ಕೆ ಗುದ್ದಲಿ ಪೂಜೆ Hudali Puja for building construction

ಹಾವೇರಿ 19 : ಇಲ್ಲಿನ ಕಾಗಿನೆಲೆ ರೋಡಿನ ಹತ್ತಿರದ ಕಾಂಗ್ರೆಸ್ ಪಕ್ಷದ ಬಹುದಿನ ಎಲ್ಲರ ಬಯಕೆಯಂತೆ  ಕಚೇರಿ ಕಟ್ಟಡ ನಿರ್ಮಾಣಕ್ಕೆ ಗುದ್ದಲಿ ಪೂಜೆಯನ್ನು   ಜಿಲ್ಲಾ ಉಸ್ತುವಾರಿ ಸಚಿವರಾದ ಶಿವಾನಂದ ಪಾಟೀಲ,ವಿಧಾನ ಪರಿಷತ್ ಮುಖ್ಯ ಸಚೇತಕರಾದ ಸಲೀಂ ಅಹ್ಮದ್  ಹಾಗೂ ಜಿಲ್ಲೆಯ ಶಾಸಕರು ನೇರವೆರಿಸಿದರು. ಈ ಸಂದರ್ಭದಲ್ಲಿ  ವಿಧಾನಸಭೆ ಉಪಸಭಾಧ್ಯಕ್ಷರಾದ ರುದ್ರ​‍್ಪ ಲಮಾಣಿ, ಶಾಸಕರಾದ ಬಸವರಾಜ ಶಿವಣ್ಣನವರ, ಯು.ಬಿ.ಬಣಕಾರ, ಪ್ರಕಾಶ ಕೋಳಿವಾಡ, ಯಾಸೀರ್ ಅಹ್ಮದ್ ಖಾನ್ ಪಠಾಣ, ಹೆಸ್ಕಾಂ ಅಧ್ಯಕ್ಷರಾದ ಸಯ್ಯದ್ ಅಜ್ಜಿಂಫೀರ್ ಎಸ್‌.ಖಾದ್ರಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನದ ರಾಜ್ಯ ಉಪಾಧ್ಯಕ್ಷರಾದ ಎಸ್‌.ಆರ್‌. ಪಾಟೀಲ, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸೋಮಣ್ಣ ಬೇವಿನಮರದ, ಪಶ್ಚಿಮ ಪದವೀಧರ ಕ್ಷೇತ್ರದ ಅಭ್ಯರ್ಥಿ ಮೋಹನ ಲಿಂಬಿಕಾಯಿ, ಮುಖಂಡರಾದ ಎಸ್‌.ಎಫ್‌.ಎನ್‌.ಗಾಜಿಗೌಡ್ರ, ಕೊಟ್ರೇಶಪ್ಪ ಬಸೇಗಣ್ಣಿ, ಪ್ರೇಮಾ ಪಾಟೀಲ ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಸಂಜೀವಕುಮಾರ ನೀರಲಗಿ, ಯುವ ಘಟಕದ ಅಧ್ಯಕ್ಷರಾದ ದರ್ಶನ ಲಮಾಣಿ, ಬಸವರಾಜ ಹೆಡಿಗೊಂಡ,ಶಂಕರ ಮೆಹರವಾಡೆ, ಶ್ರೀಧರ ದೊಡ್ಡಮನಿ,ಯಲ್ಲಪ್ಪ ದೇವಗಿರಿ ಮತ್ತು ಪಕ್ಷದ ವಿವಿಧ ಘಟಕಗಳ ಮುಖ್ಯಸ್ಥರು ಹಾಗೂ ಪದಾಧಿಕಾರಿಗಳು ಮತ್ತು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.