ಹಿರಿಯ ನಾಗರಿಕರಿಗೆ, ದಿವ್ಯಾಂಗರಿಗೆ ಸಾಧನ ಸಲಕರಣೆ ವಿತರಿಸುವ ಬೃಹತ್ ಕಾರ್ಯಕ್ರಮ
ಪ್ರಯಾಗ್ ರಾಜ್, ಫೆ 28 : ಉತ್ತರಪ್ರದೇಶದ ಪ್ರಯಾಗ್ ರಾಜ್ ನಲ್ಲಿ ರಾಷ್ಟ್ರೀಯ ವಯೋಶ್ರೀ ಯೋಜನೆಯಡಿ ಹಿರಿಯ ನಾಗರಿಕರಿಗೆ ಮತ್ತು ದಿವ್ಯಾಂಗರಿಗೆ ಸಾಧನ ಸಲಕರಣ ನೀಡುವ ಯೋಜನೆಯಡಿ ವಿಕಲಚೇತನರಿಗೆ ಅಗತ್ಯ ಸಾಧನ ಸಲಕರಣಗಳನ್ನು ವಿತರಿಸುವ ಬೃಹತ್ ಕಾರ್ಯಕ್ರಮಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಶನಿವಾರ ಉದ್ಘಾಟಿಸಲಿದ್ದಾರೆ.
ಇದು ದೇಶದ ಬೃಹತ್ ಕಾರ್ಯಕ್ರಮವಾಗಿದ್ದು ಇದರಡಿ ಫಲಾನುಭವಿಗಳ ಸಂಖ್ಯೆ ಮತ್ತು ವಿತರಣೆಯಾಗಲಿರುವ ಸಾಧನ ಸಲಕರಣೆಗಳ ಸಂಖ್ಯೆ ಅತಿ ಹೆಚ್ಚಿದೆ. ಈ ಬೃಹತ್ ಶಿಬಿರದಲ್ಲಿ 56 ಸಾವಿರಕ್ಕೂ ಹೆಚ್ಚು ವಿವಿಧ ಸಾಧನ ಸಲಕರಣಗಳನ್ನು 26 ಸಾವಿರಕ್ಕೂ ಹೆಚ್ಚು ಫಲಾನುಭವಿಗಳಿಗೆ ಉಚಿತವಾಗಿ ನೀಡಲಾಗುತ್ತದೆ. ಈ ಎಲ್ಲ ಸಾಧನ, ಸಲಕರಣೆಗಳ ವೆಚ್ಚ 19 ಕೋಟಿ ರೂಪಾಯಿಗೂ ಹೆಚ್ಚು ಎಂದು ಮೂಲಗಳು ತಿಳಿಸಿವೆ.
ದಿವ್ಯಾಂಗರು ಮತ್ತು ಹಿರಿಯ ನಾಗರಿಕರ ದೈನಂದಿನ ಚಟುವಟಿಕೆಗಳಿಗೆ ನೆರವಾಗುವ ಸಾಧನಗಳನ್ನು ನೀಡುವುದು ಈ ಯೋಜನೆಯ ಮುಖ್ಯ ಗುರಿಯಾಗಿದೆ. ಈ ಮೂಲಕ ಅವರ ಸಾಮಾಜಿಕ – ಆರ್ಥಿಕ ಅಭಿವೃದ್ಧಿಗೆ ನೆರವಾಗುವ ಆಶಯ ಹೊಂದಲಾಗಿದೆ.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 